ಚಾಮರಾಜನಗರ: ಸುಳ್ವಾಡಿ ಮಾರಮ್ಮ ದೇವಸ್ಥಾನದಲ್ಲಿ ಪ್ರಸಾದ ಸೇವಿಸಿ ಸಾವಿಗೀಡಾದವರ ಸಂಖ್ಯೆ ಏರುತ್ತಲೇ ಇದೆ. ಇಂದು ಮತ್ತೋರ್ವ ಮಹಿಳೆ ಮೃತಪಟ್ಟಿದ್ದು, ಸತ್ತವರ ಸಂಖ್ಯೆ ೧೫ಕ್ಕೆ ಏರಿದೆ.
ದೇವಾಲಯದಲ್ಲಿ ಪ್ರಸಾದ ಸೇವನೆಯಿಂದ ಅಸ್ಪಸ್ಥಗೊಂಡಿದ್ದ ದುಂಡಮ್ಮ ಎಂಬುವರು ಇಂದು ಕಾವೇರಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇವರು ಮಲೆಮಾದೇಶ್ವರಬೆಟ್ಟದ ಸಾಲೂರು ಮಠದ ರಸ್ತೆಯ ನಿವಾಸಿಯಾದ ನಾಗರಾಜ್ ಎಂಬುವರ ಪತ್ನಿ ಎಂದು ತಿಳಿದುಬಂದಿದೆ. ಆಸ್ಪತ್ರೆಗೆ ದಾಖಲಾದವರಲ್ಲಿ ಮೃತಪಟ್ಟವರ ಸಂಖ್ಯೆ ಹೆಚ್ಚುತ್ತಿದೆ. ಈ ಹಿಂದೆಯೂ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದ ಸಾಲಮ್ಮ(೩೫) ಹಾಗೂ ಎಂ.ಜಿ.ದೊಡ್ಡಿಯ ಮಗೇಶ್ವರಿ ಎಂಬ ಇಬ್ಬರು ಮಹಿಳೆಯರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು.