ಸುಳ್ವಾಡಿ ವಿಷ ಪ್ರಸಾದ ದುರಂತ: ಮತ್ತೊಂದು ಜೀವ ಬಲಿ!

ಸುಳ್ವಾಡಿ ವಿಷ ಪ್ರಸಾದ ದುರಂತ: ಮತ್ತೊಂದು ಜೀವ ಬಲಿ!

ಚಾಮರಾಜನಗರ: ಹನೂರು ತಾಲೂಕಿನ ಸುಳ್ವಾಡಿ ಮಾರಮ್ಮ ದೇವಸ್ಥಾನ ವಿಷ ಪ್ರಸಾದ ದುರಂತ ಪ್ರಕರಣದಲ್ಲಿ ಮೃತಪಟ್ಟವರ ಸಂಖ್ಯೆ 16ಕ್ಕೇರಿದೆ.

ಇಂದು ಬೆಳಗ್ಗೆ ಹನೂರು ಸಮೀಪದ ಮಾರ್ಟಳ್ಳಿ ನಿವಾಸಿ ನಾಗೇಶ್ ಎಂಬವರು ಚಿಕಿತ್ಸೆ ಫಲಕಾರಿಯಾಗದೆ ಮೈಸೂರಿನ ಜೆಎಸ್​ಎಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಮೃತದೇಹವನ್ನು ಜೆಎಸ್ಎಸ್ ಆಸ್ಪತ್ರೆಯಿಂದ ಕೆ.ಆರ್.ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಬಳಿಕ ಚಾಮರಾಜನಗರಕ್ಕೆ ರವಾನಿಸಲಾಗುತ್ತದೆ ಎಂದು ತಿಳಿದು ಬಂದಿದೆ.

ಮೃತರು ಪತ್ನಿ ಹಾಗೂ ನಾಲ್ಕು ಪುತ್ರಿಯರನ್ನು ಅಗಲಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos