ಮಂಡ್ಯ,ಜೂ. 27: ಕೆಂಪೇಗೌಡ ಜಯಂತಿ ಅಂಗವಾಗಿ ಮುದ್ರಿಸಿದ ಆಹ್ವಾನ ಪತ್ರಿಕೆಯಲ್ಲಿ ಸುಮಲತಾ ಅಂಬರೀಶ್ ಹೆಸರು ಸೇರಿಸುವುದನ್ನೇ ತಾಲೂಕು ಆಡಳಿತ ಮರೆತಿದೆ.ಕೆ.ಆರ್ ಪೇಟೆ ತಾಲೂಕಿನಲ್ಲಿ ಕೆಂಪೇಗೌಡ ಜಯಂತಿ ಅಂಗವಾಗಿ ಆಹ್ವಾನ ಪತ್ರಿಕೆ ಮಾಡಿಸಲಾಗಿತ್ತು.ಮಂಡ್ಯದ ನೂತನ ಸಂಸದೆ ಸುಮಲತಾ ಅವರ ಹೆಸರನ್ನೇ ತಾಲೂಕು ಆಡಳಿತ ಮಂಡಳಿ ಕೈ ಬಿಟ್ಟಿದೆ.
ಕಾಂಗ್ರೆಸ್, ಜೆಡಿಎಸ್, ಹಾಗೂ ಬಿಜೆಪಿ ಕಾರ್ಯಕರ್ತರು ಅಭಿಮಾನಿಗಳು ತಾಲೂಕಿ ಆಡಳಿತ ಮಂಡಳಿ ವಿರುದ್ಧ ಗರಂ ಆಗಿದ್ದಾರೆ. ರಾಜಕೀಯ ಪ್ರೇರಿತವಾಗಿ ಹೆಸರು ಕೈ ಬಿಡಲಾಗಿದೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.