ಕನ್ನಡದಲ್ಲೆ ಭಾಷಣ ಮಾಡಿದ ‘ಸುಮಾಲತಾ’

ಕನ್ನಡದಲ್ಲೆ ಭಾಷಣ ಮಾಡಿದ ‘ಸುಮಾಲತಾ’

ನವದೆಹಲಿ,ಜು. 2 : ಕರ್ನಾಟಕ ಮತ್ತು ನನ್ನ ಕ್ಷೇತ್ರವಾದ ಮಂಡ್ಯಕ್ಕೆ ನೀರಿನ ಸಮಸ್ಯೆ ಉಂಟಾಗಿದ್ದು, ಕುಡಿಯುವ ನೀರಿಗಾಗಿಯೂ ಪರದಾಡುವ ಸ್ಥಿತಿ ನಿರ್ಮಾಣವಿದೆ. ಕುಡಿಯುವ ನೀರು ಬಿಡಿ ಎಂದು ಮಂಡ್ಯ ಲೋಕಸಭೆ ಕ್ಷೇತ್ರದ ಸಂಸದೆ ಸಂಸತ್ತಿನಲ್ಲಿ ಕನ್ನಡದಲ್ಲಿಯೇ ಧ್ವನಿ ಎತ್ತಿದ್ದಾರೆ. ಸುಮಾಲತಾ ಸಂಸತಿನಲ್ಲಿ ಮಾತನಾಡಿ, ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವವಾಗಿದೆ. ನೀರಿಲ್ಲದೆ ರೈತರು ಸಂಕಷ್ಟದ ಸ್ಥಿತಿ ಇದೆ. ಕೂಡಲೇ ರಾಜ್ಯಕ್ಕೆ ನೀರು ಬಿಡುವಂತೆ ಒತ್ತಾಯಿಸಿದ್ದಾರೆ.

17ನೇ ಸಾರ್ವತ್ರಿಕ ಚುನಾವಣೆಯಲ್ಲಿ ಮಂಡ್ಯ ಲೋಕಸಭೆ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಸುಮಲತಾ ಅವರು, ಮೈತ್ರಿ ಕೂಟದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರನ್ನು ಪರಾಭವಗೊಳಿಸಿ ಲೋಕಸಭೆಗೆ ಆಯ್ಕೆಯಾಗಿದ್ದುರು. ಇಂದು ಸಂಸತ್ತಿನಲ್ಲಿ ಕನ್ನಡದಲ್ಲಿಯೇ ಚೊಚ್ಚಲ ಭಾಷಣ ಮಾಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos