ಸುಮಲತಾ ಕಾಂಗ್ರೆಸ್ ವಿರುದ್ಧ ಹೋಗೊಲ್ಲ

ಸುಮಲತಾ ಕಾಂಗ್ರೆಸ್ ವಿರುದ್ಧ ಹೋಗೊಲ್ಲ

ಹುಬ್ಬಳ್ಳಿ, ಮಾ.9,ನ್ಯೂಸ್ ಎಕ್ಸ್ ಪ್ರೆಸ್: ಸುಮಲತಾ ಅಂಬರೀಶ್ ಹಾಗೂ ಜೆಡಿಎಸ್ ನಡುವೆ ವಾಕ್ಸಮರ ಮುಂದುವರೆದಿರುವ ಬೆನ್ನಲ್ಲೇ ಸುಮಲತಾ ಅಂಬರೀಶ್ ಅವರು ಕಾಂಗ್ರೆಸ್ ಪಕ್ಷದ ವಿರುದ್ಧ ಹೋಗುವುದಿಲ್ಲ ಎಂಬ ವಿಶ್ವಾಸವನ್ನು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ವ್ಯಕ್ತಪಡಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಸುಮಲತಾ ಅಂಬರೀಶ್ ಅವರ ಮನವೊಲಿಸಲು ಯಾರೂ ಹೇಳಿಲ್ಲ. ಆದರೆ, ನಾನೇ ಅವರನ್ನು ಮಾತನಾಡಿಸಿ ಪಕ್ಷದ ನಿಲುವು ತಿಳಿಸಿದ್ದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಕುರಿತು ಹೇಳಿಕೆ ನೀಡಿದ್ದಾರೆ.

ಪಕ್ಷ ಈಗಾಗಲೇ ಮಂಡ್ಯ ವಿಚಾರದಲ್ಲಿ ತೀರ್ಮಾನ ಮಾಡಿದೆ ಎಂದರು. ಸುಮಲತಾ ಅವರ ಬಗ್ಗೆ ರೇವಣ್ಣ ಅವರ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್ ಅವರು, ಈ ವಿಚಾರದ ಬಗ್ಗೆ ನನಗೇನೂ ಗೊತ್ತಿಲ್ಲ. ತಿಳಿದುಕೊಂಡು ಪ್ರತಿಕ್ರಿಯಿಸುವುದಾಗಿ ಹೇಳಿದರು.

ಬಜೆಟ್ನಲ್ಲಿ ಮಹದಾಯಿ ಹಣ ಮೀಸಲಿಡದ ವಿಚಾರ ಪ್ರಸ್ತಾಪಿಸಿದಾಗ, ಬಜೆಟ್ನಲ್ಲಿ ಘೋಷಣೆ ಮಾಡದಿದ್ದರೂ ಸರ್ಕಾರ ಯೋಜನೆ ಕೈಗೆತ್ತಿಕೊಳ್ಳಲಿದೆ ಎಂದು ಭರವಸೆ ನೀಡಿದರು.

ಫ್ರೆಶ್ ನ್ಯೂಸ್

Latest Posts

Featured Videos