ಮಂಡ್ಯ, ಏ.1, ನ್ಯೂಸ್ ಎಕ್ಸ್ ಪ್ರೆಸ್: ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಜನರ ಗಮನ ಸೆಳೆದಿರುವ ಮಂಡ್ಯ ಕ್ಷೇತ್ರದ ಚುನಾವಣೆಯ ಕಣ ಮತ್ತಷ್ಟು ರಂಗೇರಿದೆ. ನಾಳೆಯಿಂದ ಚಿತ್ರರಂಗದ ಸಾಕಷ್ಟು ಗಣ್ಯರು ಅಭ್ಯರ್ಥಿ ಸುಮಲತಾ ಪರ ಪ್ರಚಾರಕ್ಕೆ ಹೊರಡುತ್ತಿದ್ದಾರೆ.
ದರ್ಶನ್, ಯಶ್, ದೊಡ್ಡಣ್ಣ, ರಾಕ್ ಲೈನ್ ವೆಂಕಟೇಶ್ ಸೇರಿದಂತೆ ಚಿತ್ರರಂಗದಿಂದ ಸಾಕಷ್ಟು ಜನರು ಸುಮಲತಾ ಅವರಿಗೆ ಸಾಥ್ ನೀಡಿದ್ದಾರೆ.
ಸ್ಟಾರ್ ನಟ ಪ್ರಚಾರಕರ ಪಟ್ಟಿಗೆ ಈಗ ನಟ ನೆನಪಿರಲಿ ಪ್ರೇಮ್ ಕೂಡ ಸೇರಿಕೊಂಡಿದ್ದಾರೆ. ಸುಮಲತಾ ಪರ ಪ್ರಚಾರಕ್ಕೆ ಹೋಗುವುದಾಗಿ ನಟ ಪ್ರೇಮ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ”ನಾಳೆಯಿಂದ ಸುಮಲತಾ ಅಕ್ಕನ ಪರ ಪ್ರಚಾರಕ್ಕೆ ಹೋಗುತ್ತಿದ್ದೀನಿ. ನಿಮ್ಮೆಲ್ಲರ ಸಹಕಾರ ಸುಮಲತಾ ಅಕ್ಕನಿಗೆ ಬೇಕು” ಎಂದು ಪ್ರೇಮ್ ಕೇಳಿಕೊಂಡಿದ್ದಾರೆ.