ಗಂಡ ಸತ್ತು 6 ತಿಂಗಳಾಗಿಲ್ಲ ಈಗಲೇ ಚುನಾವಣೆ ಬೇಕಾ? ಸುಮಲತಾ ವಿರುದ್ಧ ರೇವಣ್ಣ ವಾಗ್ದಾಳಿ

ಗಂಡ ಸತ್ತು 6 ತಿಂಗಳಾಗಿಲ್ಲ ಈಗಲೇ ಚುನಾವಣೆ ಬೇಕಾ? ಸುಮಲತಾ ವಿರುದ್ಧ ರೇವಣ್ಣ ವಾಗ್ದಾಳಿ

ನವದೆಹಲಿ, ಮಾ.8, ನ್ಯೂಸ್ ಎಕ್ಸ್ ಪ್ರೆಸ್: ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆಗೆ ಸಿದ್ಧತೆ ನಡೆಸಿರುವ ಸುಮಲತಾ ಅಂಬರೀಶ್ ಬಗ್ಗೆ ಸಚಿವ ಹೆಚ್.ಡಿ. ರೇವಣ್ಣ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಪತಿ, ಮಾಜಿ ಸಚಿವ ಅಂಬರೀಶ್ ಸತ್ತೂ ಇನ್ನೂ ಆರು ತಿಂಗಳಾಗಿಲ್ಲ. ಸುಮಲತಾ ಅವರಿಗೆ ಇದೆಲ್ಲಾ ಬೇಕಿತ್ತಾ? ಕುಟುಂಬ ರಾಜಕಾರಣ, ರಾಜಕೀಯದಲ್ಲಿ ಸಹಜ ಎಂದು ಸುಮಲತಾ ಅಂಬರೀಶ್ ಬಗ್ಗೆ ಹೆಚ್.ಡಿ. ರೇವಣ್ಣ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಸಿಎಂ ಕುಮಾರಸ್ವಾಮಿ ಅವರು ಅಂಬರೀಶ್ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸಿಕೊಟ್ಟರು. ಆದರೆ ಸುಮಲತಾ ಅಂಬರೀಶ್ ಗೆ ಯಾವುದೇ ಕೃತಜ್ಞತೆಯೂ ಇಲ್ಲ. ಸುಮಲತಾ ಅವರು ಚಾಲೆಂಜ್ ಮಾಡುತ್ತಿದ್ದಾರೆ. ಇದನ್ನು ನಾವು ಎದುರಿಸಲು ಸಿದ್ಧರಾಗಿದ್ದೇವೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos