ಮಂಡ್ಯ, ಮೇ. 6, ನ್ಯೂಸ್ ಎಕ್ಸ್ ಪ್ರೆಸ್: ಬೀದರ್ ಜಿಲ್ಲೆಯ ಬಸವಕಲ್ಯಾಣದ ಬಸವಧರ್ಮದ ಪ್ರಸಾರಕ ಬಸವಾನಂದಸ್ವಾಮಿ ಅವರು, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಗೆಲುವು ಸಾಧಿಸುತ್ತಾರೆ ಅಂತಾ ಭವಿಷ್ಯ ನುಡಿದಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಸುಮಲತಾ ಪ್ರಬುದ್ಧ, ಮೃದು ಮಾತಿನಿಂದ ಎಲ್ಲ ಸಮುದಾಯದವರ ಹೃದಯ ಗೆದ್ದಿದ್ದಾರೆ. ಅವರು ಮಾತೃಹೃದಯಿ, ಅವರಿಗೆ ಉತ್ತಮ ರಾಜಕೀಯ ಭವಿಷ್ಯವಿದೆ. ಈ ಬಾರಿ ಗೆಲ್ಲುವುದರ ಜೊತೆಗೆ ಕೇಂದ್ರ ಸಚಿವರಾಗುವುದು ನಿಶ್ಚಿತ ಅಂತಾ ಭವಿಷ್ಯ ನುಡಿದಿದ್ದಾರೆ. ಇದೇ ವೇಳೆ, ನರೇಂದ್ರ ಮೋದಿ ಎರಡನೇ ಬಾರಿ ಪ್ರಧಾನಿಯಾಗುತ್ತಾರೆ. ರಾಜ್ಯದಲ್ಲಿ ಬಿ.ಎಸ್.ಯಡಿಯೂರಪ್ಪ ಮತ್ತೆ ಸಿಎಂ ಆಗುವುದು ಖಚಿತ ಅಂತಾ ಎಂದು ಬಸವಾನಂದಸ್ವಾಮಿ ಭವಿಷ್ಯ ನುಡಿದಿದ್ದಾರೆ.