ಸುಮಲತಾ ಗೆಲುವು ನಿಶ್ಚಿತ -ಬಸವಾನಂದಸ್ವಾಮಿ ಭವಿಷ್ಯ

ಸುಮಲತಾ ಗೆಲುವು ನಿಶ್ಚಿತ -ಬಸವಾನಂದಸ್ವಾಮಿ ಭವಿಷ್ಯ

ಮಂಡ್ಯ, ಮೇ. 6, ನ್ಯೂಸ್ ಎಕ್ಸ್ ಪ್ರೆಸ್: ಬೀದರ್ ಜಿಲ್ಲೆಯ ಬಸವಕಲ್ಯಾಣದ ಬಸವಧರ್ಮದ ಪ್ರಸಾರಕ ಬಸವಾನಂದಸ್ವಾಮಿ ಅವರು, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸುಮಲತಾ  ಗೆಲುವು ಸಾಧಿಸುತ್ತಾರೆ ಅಂತಾ ಭವಿಷ್ಯ ನುಡಿದಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಸುಮಲತಾ ಪ್ರಬುದ್ಧ, ಮೃದು ಮಾತಿನಿಂದ ಎಲ್ಲ ಸಮುದಾಯದವರ ಹೃದಯ ಗೆದ್ದಿದ್ದಾರೆ. ಅವರು ಮಾತೃಹೃದಯಿ, ಅವರಿಗೆ ಉತ್ತಮ ರಾಜಕೀಯ ಭವಿಷ್ಯವಿದೆ. ಈ ಬಾರಿ ಗೆಲ್ಲುವುದರ ಜೊತೆಗೆ ಕೇಂದ್ರ ಸಚಿವರಾಗುವುದು ನಿಶ್ಚಿತ ಅಂತಾ ಭವಿಷ್ಯ ನುಡಿದಿದ್ದಾರೆ. ಇದೇ ವೇಳೆ, ನರೇಂದ್ರ ಮೋದಿ ಎರಡನೇ ಬಾರಿ ಪ್ರಧಾನಿಯಾಗುತ್ತಾರೆ. ರಾಜ್ಯದಲ್ಲಿ ಬಿ.ಎಸ್.ಯಡಿಯೂರಪ್ಪ ಮತ್ತೆ ಸಿಎಂ ಆಗುವುದು ಖಚಿತ ಅಂತಾ ಎಂದು ಬಸವಾನಂದಸ್ವಾಮಿ ಭವಿಷ್ಯ ನುಡಿದಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos