ಮಂಡ್ಯ, ಮಾ.18, ನ್ಯೂಸ್ ಎಕ್ಸ್ ಪ್ರೆಸ್: ಮಂಡ್ಯ ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ನಟಿ ಸುಮಲತಾ ಅಂಬರೀಶ್ ಇಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸುತ್ತಿದ್ದು, ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ರಾಕಿಂಗ್ ಸ್ಟಾರ್ ಯಶ್ ಭಾಗವಹಿಸಿದ್ದಾರೆ
ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ವಿಚಾರವಾಗಿ ಮಾರ್ಚ್ 18ರಂದು ಸುಮಲತಾ ಅಂಬರೀಶ್ ಅವರು ಅಧಿಕೃತವಾಗಿ ಘೋಷಿಸಲಿದ್ದೇವೆ ಎಂದು ಸುಮಲತಾ ಹೇಳಿದ್ದರು. ಅದರಂತೆ ಇಂದು ತಮ್ಮ ನಿರ್ಧಾರವನ್ನ ಪ್ರಕಟ ಮಾಡಲಿದ್ದಾರೆ. ಸುಮಲತಾ ಸುಮಲತಾ, ಯಶ್, ದರ್ಶನ್ ಜೊತೆ ರಾಕ್ ಲೈನ್ ವೆಂಕಟೇಶ್, ದೊಡ್ಡಣ್ಣ, ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ ಕೂಡ ಉಪಸ್ಥಿತರಿದ್ದಾರೆ.