ಮಂಡ್ಯ, ನ. 22: ರಾಜ್ಯದಲ್ಲಿ ಉಪಚುನಾವಣೆಯ ಕಣ ದಿನೆ ದಿನೆ ರಂಗೇರುತ್ತಿದ್ದು, ಸಂಸದೆ ಸುಮಲತಾ ಅಂಬರೀಶ್ ಯಾವ ಪಕ್ಷ ಬೆಂಬಲಿಸುತ್ತಾರೆ ಎನ್ನುವ ಕುತೂಹಲ ಅನೇಕರಲ್ಲಿದೆ. ಈ ವಿಚಾರದಲ್ಲಿ ಸುಮಲತಾ ಕೂಡ ಮೌನವಹಿಸಿದ್ದಾರೆ. ಈಗ ಕೆಆರ್ ಪೇಟೆ ಉಪಚುನಾವಣೆಯಲ್ಲಿ ಸುಮಲತಾ ಪಕ್ಷೇತರ ಅಭ್ಯರ್ಥಿಗೆ ಬೆಂಬಲ ಸೂಚಿಸಿದ್ದಾರಾ ಎನ್ನುವ ಅನುಮಾನ ಮೂಡಿದೆ.
ಕೆಆರ್ ಪೇಟೆ ಉಪಚುನಾವಣೆಯಲ್ಲಿ ಘಟಾನುಘಟಿಗಳು ಕಣಕ್ಕೆ ಇಳಿದಿದ್ದಾರೆ. ಬಿಜೆಪಿಯಿಂದ ಕೆ.ಸಿ.ನಾರಾಯಣಗೌಡ, ಕಾಂಗ್ರೆಸ್ನಿಂದ ಕೆ.ಬಿ ಚಂದ್ರಶೇಖರ್, ಜೆಡಿಎಸ್ನಿಂದ ದೇವರಾಜ್ ಬಿ.ಎಲ್, ಉತ್ತಮ ಪ್ರಜಾಕೀಯ ಪಕ್ಷದಿಂದ ಚಂದ್ರೇಗೌಡ ಎಚ್ಎಂ, ಪುರ್ವಾಂಚಲ ಮಹಾ ಪಂಚಾಯತ್ ಪಕ್ಷದಿಂದ ರೇವಣ್ಣ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ಸರ್ವೆ ದೇವೇಗೌಡ ಸ್ಪರ್ಧೆಗೆ ಇಳಿದಿದ್ದಾರೆ. ಸುಮಲತಾ ಸರ್ವೆ ದೇವೇಗೌಡರಿಗೆ ಬೆಂಬಲ ನೀಡಿದ್ದಾರೆ ಎನ್ನುವ ಮಾತು ಕೇಳಿ ಬಂದಿದೆ.