ಬೆಂಗಳೂರು, ಜೂನ್.6, ನ್ಯೂಸ್ ಎಕ್ಸ್ ಪ್ರೆಸ್ : ಲೋಕಸಭಾ ಚುನಾವಣೆಯಲ್ಲಿ ಬಾರಿ ಕುತೂಹಲ ಕೆರಳಿಸಿದ್ದ ಮಂಡ್ಯ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಸುಮಲತಾ ಅಂಬರೀಶ್ ಸಂಸತ್ ಭವನ ಎದುರು ಫೋಟೊ ತೆಗೆಸಿಕೊಂಡಿದ್ದಾರೆ.ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ವಿರುದ್ಧ ಭಾರಿ ಅಂತರದಿಂದ ಜಯಗಳಿಸಿದ ಸುಮಲತಾ ಅಂಬರೀಶ್ ಮೊದಲ ಬಾರಿಗೆ ಲೋಕಸಭೆಗೆ ತೆರಳಿದ್ದಾರೆ.
ಮೊದಲ ಬಾರಿಗೆ ಲೋಕಸಭೆಗೆ ತೆರಳಿರುವ ನೂತನ ಸಂಸದೆ ಸುಮಲತಾ ಅಂಬರೀಶ್ ಅವರು ಸಂಸತ್ ಭವನ ಎದುರು ನಿಂತು ತೆಗೆಸಿದ ಫೋಟೊವನ್ನು ತಮ್ಮ ಅಭಿಮಾನಿಗಳಿಗಾಗಿ ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದಾರೆ. ಹಾಗೆಯೇ ದೀರ್ಘ ಪ್ರಯಾಣ… ಪ್ರಜಾಪ್ರಭುತ್ವದ ಪವಿತ್ರ ದೇವಸ್ಥಾನಕ್ಕೆ… ಜೈ ಹಿಂದ್…ಜೈ ಕರ್ನಾಟಕ.. ಎಂದು ಬರೆದುಕೊಂಡಿರುವ ಅವರು ಕೊನೆಯಲ್ಲಿ ಗೌರವ ಮತ್ತು ಹೆಮ್ಮೆಯಾಗುತ್ತಿದೆ ಎಂದು ಸಹಾ ಬರೆದು ಕೊಂಡಿದ್ದಾರೆ.