ನವದೆಹಲಿ, ಏ. 26, ನ್ಯೂಸ್ ಎಕ್ಸ್ ಪ್ರೆಸ್: ಆರ್ಟಿಐ ಅಡಿ ಈ ಮಾಹಿತಿಯನ್ನು ಬಹಿರಂಗಗೊಳಿಸಬೇಕು ಎಂದು ಸುಪ್ರೀಂಕೋರ್ಟ್ ಈ ಹಿಮದೆಯೇ ಆರ್ಬಿಐಗೆ ಸೂಚನೆ ನೀಡಿತ್ತು. ಆದರೆ, ಆರ್ಬಿಐ ಅದನ್ನು ಇಲ್ಲಿಯವರೆಗೆ ಪಾಲಿಸಿರಲಿಲ್ಲ. ಆದ್ದರಿಂದ ಇದು ನ್ಯಾಯಾಂಗ ನಿಂದನೆಯಾಗುತ್ತದೆ. ಆರ್ಬಿಐಗೆ ಇದೇ ಕೊನೇ ಅವಕಾಶ ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದೆ. ಸುಸ್ತಿದಾರರ ವಿವರ ಮತ್ತು ಮಾಹಿತಿ ಹಕ್ಕು ಕಾಯ್ದೆಯಡಿ ಬ್ಯಾಂಕುಗಳ ತಪಾಸಣಾ ವರದಿಗಳನ್ನು ಬಹಿರಂಗಪಡಿಸಿ, ಇದೇ ನಿಮಗೆ ಕೊನೇ ಅವಕಾಶ ಎಂದು ಶುಕ್ರವಾರ ಸುಪ್ರೀಂಕೋರ್ಟ್ ಆರ್ಬಿಐಗೆ ಆದೇಶಿಸಿದೆ. ನ್ಯಾ.ನಾಗೇಶ್ವರ ರಾವ್ ಮತ್ತು ಎಂಆರ್ ಶಾ ಅವರಿದ್ದ ದ್ವಿಸದಸ್ಯ ಪೀಠ ಈ ಆದೇಶ ನೀಡಿದೆ. ಆರ್ಟಿಐ ಕಾಯ್ದೆ ಪ್ರಕಾರ ಸುಸ್ತಿದಾರರ ವಿವರಗಳನ್ನು ಬಹಿರಂಗಪಡಿಸಬೇಕು ಎಂದು ಕೇಳಿಕೊಂಡಾಗ ಆರ್ಬಿಐ ಮತ್ತು ಆರ್ಬಿಐ ಮಾಜಿ ಗವರ್ನರ್ ಊರ್ಜಿತ್ ಪಟೇಲ್ ಉದ್ದೇಶಪೂರ್ವಕವಾಗಿ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿದ್ದಾರೆ ಎಂದು ಆರ್ಟಿಐ ಕಾರ್ಯಕರ್ತ ಸಭಾಶ್ ಚಂದ್ರ ಅಗರವಾಲ್ ಅವರು ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಏಪ್ರಿಲ್ 2011ರಿಂದ ಡಿಸೆಂಬರ್ 2015ರವರೆಗೆ ಐಸಿಐಸಿಐ ಬ್ಯಾಂಕ್, ಆ್ಯಕ್ಸಿಸ್ ಬ್ಯಾಂಕ್, ಎಚ್ಡಿಎಫ್ಸಿ ಮತ್ತು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತಪಾಸಣಾ ವರದಿಗಳ ಪ್ರತಿಯನ್ನು ನೀಡಲು ನಿರಾಕರಿಸಿದ್ದನ್ನು ಪ್ರಶ್ನಿಸಿ ಅಗರವಾಲ್ 2015ರ ಡಿಸೆಂಬರ್ನಲ್ಲಿ ಆರ್ಟಿಐ ಮೂಲಕ ಮಾಹಿತಿಗಾಗಿ ಮನವಿ ಸಲ್ಲಿಸಿದ್ದರು. ಅಗರವಾಲ್ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಪಾರದರ್ಶಕತೆಯ ವಿಚಾರದಲ್ಲಿ ಯಾವುದೇ ನಿಯಮಗಳನ್ನು ಉಲ್ಲಂಘಿಸಿದರೆ ಅದನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದಿದೆ. ಆರ್ಟಿಐ ಅಡಿ ಈ ಮಾಹಿತಿಯನ್ನು ಬಹಿರಂಗಗೊಳಿಸಬೇಕು ಎಂದು ಸುಪ್ರೀಂಕೋರ್ಟ್ ಈ ಹಿಮದೆಯೇ ಆರ್ಬಿಐಗೆ ಸೂಚನೆ ನೀಡಿತ್ತು. ಆದರೆ, ಆರ್ಬಿಐ ಅದನ್ನು ಇಲ್ಲಿಯವರೆಗೆ ಪಾಲಿಸಿರಲಿಲ್ಲ. ಆದ್ದರಿಂದ ಇದು ನ್ಯಾಯಾಂಗ ನಿಂದನೆಯಾಗುತ್ತದೆ. ಆರ್ಬಿಐಗೆ ಇದೇ ಕೊನೇ ಅವಕಾಶ ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದೆ. ಈ ಹಿಂದೆ ದೇಶದ ಸಹಕಾರಿ ಬ್ಯಾಂಕ್ಗಳ ಲೆಕ್ಕ ತಪಾಸಣಾ ವರದಿಯ ವಿವರವನ್ನು ಸಾರ್ವಜನಿಕರಿಗೆ ಬಹಿರಂಗಗೊಳಿಸುವಂತೆ ಕೇಂದ್ರ ಮಾಹಿತಿ ಆಯೋಗವು ಆರ್ಬಿಐಗೆ ನಿರ್ದೇಶನ ನೀಡಿತ್ತು.