ಮಮತಾ ಬ್ಯಾನರ್ಜಿಗೆ ಹಿನ್ನಡೆ; ವಿಚಾರಣೆಗೆ ಹಾಜರಾಗಲು ರಾಜೀವ್ ಕುಮಾರ್ ಗೆ ಸುಪ್ರೀಂ ಆದೇಶ

ಮಮತಾ ಬ್ಯಾನರ್ಜಿಗೆ ಹಿನ್ನಡೆ; ವಿಚಾರಣೆಗೆ ಹಾಜರಾಗಲು ರಾಜೀವ್ ಕುಮಾರ್ ಗೆ ಸುಪ್ರೀಂ ಆದೇಶ

ನವದೆಹಲಿ: ಇಂದು ಸುಪ್ರೀಂ
ಕೋರ್ಟ್ ಕೋಲ್ಕತ್ತಾ ಪೊಲೀಸರು ವಿಚಾರಣೆಗೆ ಬಂದಿದ್ದ ಸಿಬಿಐ ಅಧಿಕಾರಿಗಳನ್ನ ಬಂಧಿಸಿದ್ದ ಪ್ರಕರಣದ ವಿಚಾರಣೆ ನಡೆಯಿತು. ಸುಪ್ರೀಂ ಕೋರ್ಟ್‍ ತ್ರಿಸದಸ್ಯ ಪೀಠದಲ್ಲಿ ಸಿಜೆ ರಂಜನ್​ ಗೋಗಯ್​ ವಿಚಾರಣೆ ನಡೆಸಿ ಮಹತ್ವದ ತೀರ್ಪು ನೀಡಿದೆ.

ನಾವು
ಕೋಲ್ಕತ್ತಾ ನಗರ ಪೊಲೀಸ್​ ಆಯುಕ್ತ ರಾಜೀವ್ ಕುಮಾರ್ ಅವರನ್ನ ವಿಚಾರಣೆಗೆ ಹಾಜರಾಗಲು ಸೂಚಿಸಿದ್ದೇವೆ. ಅವರು ಯಾಕೆ ಸಿಬಿಐ ವಿಚಾರಣೆಗೆ ಹಾಜರಾಗಿಲ್ಲ? ವಿಚಾರಣೆಗೆ ಹಾಜರಾಗಲು ಏನು ಸಮಸ್ಯೆ? ಸಿಬಿಐ ಅಧಿಕಾರಿಗಳ ವಿಚಾರಣೆಗೆ ಹಾಜರಾಗುವಂತೆ ಪೊಲೀಸ್ ಕಮಿಷನರ್​ಗೆ ಸುಪ್ರೀಂ ಕೋರ್ಟ್​ ಸೂಚಿಸಿದೆ.

ಅಷ್ಟೇ ಅಲ್ಲದೇ ಪಶ್ಚಿಮ ಬಂಗಾಳ ಸರ್ಕಾರಕ್ಕೆ ನ್ಯಾಯಾಂಗ ನಿಂದನೆ ಆರೋಪಕ್ಕೆ ಸಂಬಂಧಿಸಿದಂತೆ ನೋಟಿಸ್ ಕೂಡ ಜಾರಿ ಮಾಡಲಾಗಿದೆ. ಸಿಬಿಐ ಪರ ಅಟಾರ್ನಿ ಜನರಲ್ ಕೆಕೆ ವೇಣುಗೋಪಾಲ್ ವಾದ ಮಂಡಿಸಿದರು.

ಫ್ರೆಶ್ ನ್ಯೂಸ್

Latest Posts

Featured Videos