ನವದೆಹಲಿ: ಇಂದು ಸುಪ್ರೀಂ
ಕೋರ್ಟ್ ಕೋಲ್ಕತ್ತಾ ಪೊಲೀಸರು ವಿಚಾರಣೆಗೆ ಬಂದಿದ್ದ ಸಿಬಿಐ ಅಧಿಕಾರಿಗಳನ್ನ ಬಂಧಿಸಿದ್ದ ಪ್ರಕರಣದ ವಿಚಾರಣೆ ನಡೆಯಿತು. ಸುಪ್ರೀಂ ಕೋರ್ಟ್ ತ್ರಿಸದಸ್ಯ ಪೀಠದಲ್ಲಿ ಸಿಜೆ ರಂಜನ್ ಗೋಗಯ್ ವಿಚಾರಣೆ ನಡೆಸಿ ಮಹತ್ವದ ತೀರ್ಪು ನೀಡಿದೆ.
ನಾವು
ಕೋಲ್ಕತ್ತಾ ನಗರ ಪೊಲೀಸ್ ಆಯುಕ್ತ ರಾಜೀವ್ ಕುಮಾರ್ ಅವರನ್ನ ವಿಚಾರಣೆಗೆ ಹಾಜರಾಗಲು ಸೂಚಿಸಿದ್ದೇವೆ. ಅವರು ಯಾಕೆ ಸಿಬಿಐ ವಿಚಾರಣೆಗೆ ಹಾಜರಾಗಿಲ್ಲ? ವಿಚಾರಣೆಗೆ ಹಾಜರಾಗಲು ಏನು ಸಮಸ್ಯೆ? ಸಿಬಿಐ ಅಧಿಕಾರಿಗಳ ವಿಚಾರಣೆಗೆ ಹಾಜರಾಗುವಂತೆ ಪೊಲೀಸ್ ಕಮಿಷನರ್ಗೆ ಸುಪ್ರೀಂ ಕೋರ್ಟ್ ಸೂಚಿಸಿದೆ.
ಅಷ್ಟೇ ಅಲ್ಲದೇ ಪಶ್ಚಿಮ ಬಂಗಾಳ ಸರ್ಕಾರಕ್ಕೆ ನ್ಯಾಯಾಂಗ ನಿಂದನೆ ಆರೋಪಕ್ಕೆ ಸಂಬಂಧಿಸಿದಂತೆ ನೋಟಿಸ್ ಕೂಡ ಜಾರಿ ಮಾಡಲಾಗಿದೆ. ಸಿಬಿಐ ಪರ ಅಟಾರ್ನಿ ಜನರಲ್ ಕೆಕೆ ವೇಣುಗೋಪಾಲ್ ವಾದ ಮಂಡಿಸಿದರು.