ಸುರೇಶ್ ಕುಮಾರ್ ನೇತೃತ್ವದಲ್ಲಿ ಜಾಧವ್ ಗೆಲುವಿಗಾಗಿ ಪ್ರಬುದ್ಧರ ಗೋಷ್ಠಿ

ಸುರೇಶ್ ಕುಮಾರ್ ನೇತೃತ್ವದಲ್ಲಿ ಜಾಧವ್ ಗೆಲುವಿಗಾಗಿ ಪ್ರಬುದ್ಧರ ಗೋಷ್ಠಿ

ಕಲಬುರ್ಗಿ, ಮಾ. 30, ನ್ಯೂಸ್ ಎಕ್ಸ್ ಪ್ರೆಸ್: ಮಾಜಿ ಸಚಿವ ಸುರೇಶಕುಮಾರ್ ಇಂದು ಕಲಬುರ್ಗಿಯಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಉಮೇಶ್ ಜಾಧವ್ ಪರ ಪ್ರಚಾರ ನಡೆಸಲಿದ್ದಾರೆ. ಇಂದು ಸಂಜೆ 5 ಗಂಟೆಗೆ ನಗರದ ಹೆಚ್ಕೆಸಿಸಿಐ ಸಭಾಂಗಣದಲ್ಲಿ ‘ಪ್ರಬುದ್ಧರ ಗೋಷ್ಠಿ’ ಹಮ್ಮಿಕೊಳ್ಳಲಾಗಿದೆ.

ವೈದ್ಯರು, ವಕೀಲರು, ಶಿಕ್ಷಕರು, ಸಾಹಿತಿಗಳು ಚಿಂತಕರ ಜೊತೆ ಸುರೇಶಕುಮಾರ್ ಚರ್ಚೆ ನಡೆಸಲಿದ್ದಾರೆ. ಈ ವೇಳೆ ಬಿಜೆಪಿ ಅಭ್ಯರ್ಥಿ ಡಾ.ಉಮೇಶ್ ಜಾಧವ್ ಭಾಗಿಯಾಗಲಿದ್ದು, ಜಿಲ್ಲೆಯ ಎಲ್ಲಾ ಬಿಜೆಪಿ ಶಾಸಕರು ಮತ್ತು ಮಾಜಿ ಶಾಸಕರುಗಳು ಪಕ್ಷದ ಮುಖಂಡರು ಭಾಗವಹಿಸಲಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos