ಆನೇಕಲ್:ಕಾರು ಅಪಘಾತವಾಗಿರುವ ವಿಷಯ ಕುಟುಂಬದವರಿಗೆ ತಿಳಿಯುತ್ತದೆ ಎಂದು ಭಯಗೊಂಡು ಪ್ರತಿಷ್ಠಿತ ಅಲಿಯನ್ಸ್ ಯುನಿವರ್ಸಿಟಿ ಕಾಲೇಜಿನಲ್ಲಿ ಕಾನೂನು ವ್ಯಾಸಂಗ ಮಾಡುತ್ತಿದ್ದ ವಿಧ್ಯಾರ್ಥಿ ನೇಣು ಬಿಗಿದುಕೊಂಡು ಮಾತು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾಲೇಜು ಪಕ್ಕದ ಈಡನ್ ಗಾರ್ಡನ್ಸ್ ಲೇಔಟ್ನಲ್ಲಿ ನಡೆದಿದೆ.
ಮೃತ ಯುವಕ ಹೊಸೂರು ಮೂಲದ ಕೌಶಿಕ್ ಎಂದು ಗುರುತಿಸಲಾಗಿದೆ. ಆನೇಕಲ್ ಬಳಿಯ ಅಲಯನ್ಸ್ ಕಾಲೇಜಿನಲ್ಲಿ ಕಾನೂನು ವ್ಯಾಸಂಗ ಮಾಡುತ್ತಿದ್ದ ಕೌಶಿಕ್, ಕಾಲೇಜಿಗೆ ಹತ್ತಿರದ ಈಡನ್ ಗಾರ್ಡನ್ಸ್ ಲೇಔಟ್ನಲ್ಲಿ ಮನೆ ಬಾಡಿಗೆ ಪಡೆದು ಸ್ನೇಹಿತನ ಜೊತೆ ವಾಸವಿದ್ದ. ಭಾನುವಾರ ರಾತ್ರಿ ಸ್ನೇಹಿತರ ಜೊತೆ ಪಾರ್ಟಿ ಮುಗಿಸಿಕೊಂಡು ಹೊಸೂರಿನಿಂದ ಆನೇಕಲ್ ಕಡೆಗೆ ಕಾರಿನಲ್ಲಿ ಬರುತ್ತಿರುವ ಸಂಧರ್ಭದಲ್ಲಿ ಗುಡ್ನಹಳ್ಳಿ ಕೆರೆಯ ಬಳಿ ಕಾರು ಅಪಘಾತವಾಗಿ ಸಂಪೂರ್ಣ ಜಖಂಗೊAಡಿತ್ತು.
ಕಾರಿನಲ್ಲಿದ್ದ ಇಬ್ಬರು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿ ಪ್ರಾಣಾಪಾಯದಿಂದ ಪಾರಾಗಿದ್ದರು. ಸ್ಥಳೀಯರ ಸಹಾಯದಿಂದ ಕಾರಿನಲ್ಲಿದ್ದ ಇಬ್ಬರನ್ನು ಪ್ರಾಥಮಿಕ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದಾರೆ. ಆದ್ರೆ ಆಸ್ಪತ್ರೆಗೆ ಹೋಗದೆ ಮನೆಗೆ ಹೋಗಿ ಕಾರು ಅಪಘಾತವಾಗಿರುವ ವಿಷಯ ಕುಟುಂಬದವರಿಗೆ ತಿಳಿಯುತ್ತದೆ ಎಂದು ಹೆದರಿ ಸ್ನೇಹಿತನನ್ನು ರೂಮಿನಲ್ಲಿ ಕೂಡಿ ಹಾಕಿದ ಕೌಶಿಕ್ ಫ್ಯಾನ್’ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ರೂಮ್’ನಲ್ಲಿ ಕೂಡಿ ಹಾಕಿದ್ದ ಯುವಕನ ಕಿರುಚಾಟದ ಶಬ್ದ ಕೇಳಿ ಸ್ಥಳೀಯರು ಹೋಗಿ ನೋಡಿದಾಗ ಘಟನೆ ಬೆಳಕಿಗೆ ಬಂದಿದ್ದು ಕೂಡಲೇ ಆನೇಕಲ್ ಪೋಲಿಸರಿಗೆ ಮಾಹಿತಿ ಮುಟ್ಟಿಸಿದ್ದಾರೆ. ಸ್ಥಳಕ್ಕೆ ಬಂದ ಪೋಲಿಸರು ಪರಿಶೀಲನೆ ನಡೆಸಿ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಿ, ದೂರು ದಾಖಲು ಮಾಡಿಕೊಂಡಿದ್ದಾರೆ.