ಸೂರ್ಯಕುಮಾರ್ ಯಾದವ್ ಆಟಕ್ಕೆ ತಬ್ಬಿಬ್ಬಾದ ಕಾಂಗರೂ ಪಡೆ!

ಸೂರ್ಯಕುಮಾರ್ ಯಾದವ್ ಆಟಕ್ಕೆ ತಬ್ಬಿಬ್ಬಾದ ಕಾಂಗರೂ ಪಡೆ!

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಕ್ರಿಕೆಟ್ ಎನ್ನುವುದು ಒಂದು ದೊಡ್ಡ ಮಟ್ಟದಲ್ಲಿ ಬೆಳೆದಿದೆ ಕ್ರಿಕೆಟ್ ನಲ್ಲಿ ಹಲವಾರು ಮಂದಿ ಅವರ ಜೀವನವನ್ನು ಬದಲಾಯಿಸಿಕೊಂಡಿದ್ದಾರೆ ಅದೇ ತರಹ ಟೀಮ್ ಇಂಡಿಯಾಗೆ ಬಂದಂತಹ ಯುವ ಬ್ಯಾಟರಾದ ಸೂರ್ಯ ಕುಮಾರ್ ಯಾದವರು ಅತ್ಯಂತ ಯಶಸ್ವಿದಾಯಕ ಬ್ಯಾಟರ್ ಆಗಿದ್ದಾರೆ.
ಆಸ್ಟ್ರೇಲಿಯಾ ಎದುರಿನ ಎರಡನೇ ಏಕದಿನ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಮತ್ತೊಂದು ಸ್ಪೋಟಕ ಅರ್ಧಶತಕ ಸಿಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅದರಲ್ಲೂ ಆಸೀಸ್‌ ವೇಗಿ ಕ್ಯಾಮರೋನ್ ಗ್ರೀನ್ ಬೌಲಿಂಗ್‌ನಲ್ಲಿ ಸತತ 4 ಎಸೆತಗಳಲ್ಲಿ 4 ಸಿಕ್ಸರ್ ಬಾರಿಸುವ ಮೂಲಕ ಕಾಂಗರೂ ಪಡೆ ತಬ್ಬಿಬ್ಬಾಗುವಂತೆ ಮಾಡಿದ್ದಾರೆ.
ಹೌದು, ಆಸ್ಟ್ರೇಲಿಯಾ ಎದುರಿನ ಮೊದಲ ಪಂದ್ಯದಲ್ಲೇ ಸಮಯೋಚಿತ ಅರ್ಧಶತಕ ಸಿಡಿಸುವ ಮೂಲಕ ಆತ್ಮವಿಶ್ವಾಸ ಹೆಚ್ಚಿಸಿಕೊಂಡಿದ್ದ ಸೂರ್ಯಕುಮಾರ್ ಯಾದವ್, ಎರಡನೇ ಪಂದ್ಯದಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ನಡೆಸುವ ಮೂಲಕ ಆಸ್ಟ್ರೇಲಿಯಾ ಬೌಲರ್‌ಗಳ ಮೇಲೆ ಸವಾರಿ ಮಾಡಿದರು. ಅದರಲ್ಲೂ ಭಾರತದ ಇನಿಂಗ್ಸ್‌ನ 43ನೇ ಓವರ್‌ನಲ್ಲಿ ಕ್ಯಾಮರೋನ್ ಗ್ರೀನ್ ಎಸೆದ ಮೊದಲ 4 ಎಸೆತಗಳಲ್ಲಿ 4 ಸಿಕ್ಸರ್ ಚಚ್ಚುವ ಮೂಲಕ ಅಭಿಮಾನಿಗಳನ್ನು ಬರಪೂರ ರಂಜಿಸಿದರು. ಒಂದು ಹಂತದಲ್ಲಿ ಸೂರ್ಯ 6 ಎಸೆತಗಳಲ್ಲಿ 6 ಸಿಕ್ಸರ್ ಸಿಡಿಸಬಹುದೇನೋ ಎನ್ನುವಂತ ಆಸೆ ಮೂಡಿಸಿದರು. ಆದರೆ 5ನೇ ಎಸೆತದಲ್ಲಿ ಸೂರ್ಯ ಸಿಕ್ಸರ್ ಬಾರಿಸುವುದನ್ನು ತಪ್ಪಿಸುವಲ್ಲಿ ಗ್ರೀನ್ ಯಶಸ್ವಿಯಾದರು.

ಫ್ರೆಶ್ ನ್ಯೂಸ್

Latest Posts

Featured Videos