ಮೈಸೂರು: ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಅನುದಾನದ ಅನ್ಯಾಯವಾಗಿರುವುದರಿಂದ ರಾಜ್ಯ ಕಾಂಗ್ರೆಸ್ ಸರ್ಕಾರ ನೆನ್ನೆ ದೆಹಲಿಯ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ಮಾಡಲಾಗಿತ್ತು.
ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟಿಸಲು ದೆಹಲಿಗೆ ಹೋಗಿದ್ದ ಸಿಎಂ ಸಿದ್ದರಾಮಯ್ಯ ಅಲ್ಲಿಂದ ನೇರವಾಗಿ ಜಿಲ್ಲೆಯ ನಂಜನಗೂಡು ತಾಲೂಕಿನ ಸುತ್ತೂರು ಜಾತ್ರಾ ಮಹೋತ್ಸವಕ್ಕೆ ಆಗಮಿಸಿದ್ದರು. ಸಿಎಂ ಸಿದ್ದರಾಮಯ್ಯ ಮೊದಲಿಗೆ ಸುತ್ತೂರು ಗದ್ದುಗೆಯ ದರ್ಶನ ಪಡೆದುಕೊಂಡಿದ್ದಾರೆ. ಬಳಿಕ ಜಾತ್ರಾ ಮಹೋತ್ಸವದಲ್ಲಿ ಭಾಗಿಯಾಗಿದ್ದರು.
ಈ ಸಂರ್ದಭದಲ್ಲಿ ಸಚಿವರಾದ ಡಾ.ಪರಮೇಶ್ವರ್, ವೆಂಕಟೇಶ್, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ ಸುತ್ತೂರು ಜಾತ್ರೆಯಲ್ಲಿ ಪಾಲ್ಗೊಂಡಿದ್ದರು.