ಡಿಕೆಶಿ ಭವಿಷ್ಯ ನುಡಿದ ಸ್ವಾಮೀಜಿ

ಡಿಕೆಶಿ ಭವಿಷ್ಯ ನುಡಿದ ಸ್ವಾಮೀಜಿ

ರಾಮನಗರ, ಡಿ. 26: ತಾಲೂಕು ಒಕ್ಕಲಿಗರ ಸಂಘದ ವತಿಯಿಂದ ನಿರ್ಮಿಸಲಾಗಿರುವ ‘ಒಕ್ಕಲಿಗ ಭವನ’ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಚುಂಚನಗಿರಿ ಮಠಾಧೀಶ ನಿರ್ಮಲಾನಂದನಾಥ ಸ್ವಾಮೀಜಿ ಹಾಗೂ ಸ್ಫಟಿಕಪುರಿ ಮಹಾ ಸಂಸ್ಥಾನಮಠದ ನಂಜಾವಧೂತ ಸ್ವಾಮೀಜಿ ಅವರು ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಗದ್ದುಗೆ ಅಲಂಕರಿಸಲಿ ಎಂದು ಶುಭ ಹಾರೈಸಿದರು.

ನಿರ್ಮಲಾನಂದನಾಥ ಸ್ವಾಮೀಜಿ ಮಾತನಾಡಿ, ರಾಮನಗರ ಜಿಲ್ಲೆಯಿಂದ ಕೆಂಗಲ್ ಹನುಮಂತಯ್ಯ, ಎಚ್.ಡಿ. ದೇವೇಗೌಡ ಹಾಗೂ ಎಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾರೆ. ಮುಂದೆ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಗಳಾಗುತ್ತಾರೆ. ಮುಂದೆ ಅವರಿಗೆ ಏನೇನು ಬಾಕಿ ಇದೆಯೋ ಅದೆಲ್ಲವು ಸಿಗಲಿದೆ ಎಂದರು.

ನಂಜಾವಧೂತ ಸ್ವಾಮೀಜಿ ಮಾತನಾಡಿ, ಡಿ.ಕೆ. ಶಿವಕುಮಾರ್ ಒಬ್ಬ ವ್ಯಕ್ತಿಯಾಗಿಲ್ಲ, ಶಕ್ತಿಯಾಗಿದ್ದಾರೆ. ಕುಮಾರಸ್ವಾಮಿ ಅವರನ್ನು ಎರಡನೇ ಬಾರಿಗೆ ಮುಖ್ಯಮಂತ್ರಿ ಮಾಡಲು ಡಿ.ಕೆ. ಶಿವಕುಮಾರ್ ಪಟ್ಟಪರಿಶ್ರಮ ಎಲ್ಲರಿಗೂ ಗೊತ್ತಿದೆ. ಕುಮಾರಸ್ವಾಮಿರವರು ಡಿ.ಕೆ. ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡುತ್ತಾರೊ ಅಥವಾ ಡಿ.ಕೆ. ಶಿವಕುಮಾರ್, ಕುಮಾರಸ್ವಾಮಿ ಅವರನ್ನು ಮತ್ತೆ ಮುಖ್ಯಮಂತ್ರಿ ಮಾಡಿ ಆನಂತರ ಮುಖ್ಯಮಂತ್ರಿಯಾಗುತ್ತಾರೊ ಗೊತ್ತಿಲ್ಲ ಎಂದು ಹೇಳಿದರು.

 

ಫ್ರೆಶ್ ನ್ಯೂಸ್

Latest Posts

Featured Videos