ಪ್ರಿಯಕರ ಕೈಕೊಟ್ಟಿದ್ದಕ್ಕೆ ನೇಣಿಗೆ ಶರಣಾದ ಪ್ರಿಯತಮೆ!

ಪ್ರಿಯಕರ ಕೈಕೊಟ್ಟಿದ್ದಕ್ಕೆ ನೇಣಿಗೆ ಶರಣಾದ ಪ್ರಿಯತಮೆ!

ಹುಣಸೂರು: ಪ್ರೀತಿಸಿದ ಯುವಕ ಮದುವೆಯಾಗಲು ನಿರಾಕರಿಸಿದ್ದಕ್ಕೆ ಮನನೊಂದು ಯುವತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ತಾಲೂಕಿನ ಕಟ್ಟೆಮಲ್ಲೇನವಾಡಿ ಗ್ರಾಮದ ಅರ್ಪಿತಾ(21) ಆತ್ಮಹತ್ಯೆಗೆ ಶರಣಾಗಿರುವ ಯುವತಿ.ಬಿಎ ವ್ಯಾಸಂಗ ಮಾಡುತ್ತಿದ್ದ ಅರ್ಪಿತಾ ಪಟ್ಟಣದ ಸ್ಟೋರ್ ಬೀದಿಯ ನಿವಾಸಿ ಲೋಕೇಶ್ ಎಂಬಾತನನ್ನು ಎರಡುವರ್ಷಗಳಿಂದ ಪ್ರೀತಿಸುತ್ತಿದ್ದರು ಎನ್ನಲಾಗಿದೆ.

ಇವರಿಬ್ಬರ ಪ್ರೀತಿ ವಿಷಯ ಮನೆಯವರಿಗೆ ತಿಳಿದು ಅವರು ಸಹ ಇವರಿಬ್ಬರ ಮದುವೆಗೆ ಒಪ್ಪಿಗೆ ಸೂಚಿಸಿದ್ದರು. ಆದರೆ ಲೋಕೇಶ್ ಮದುವೆಯಾಗಲು ನಿರಾಕರಿಸಿ ಆಕೆಯಿಂದ ತಪ್ಪಿಸಿಕೊಂಡು ಓಡಾಡುತ್ತಿದ್ದನು.

ಲೋಕೇಶ್‍ನ ವರ್ತನೆಯಿಂದ ಮನನೊಂದಿದ್ದ ಅರ್ಪಿತಾ ನಿನ್ನೆ ಮನೆಯವರೆಲ್ಲ ತಾತನ ಪುಣ್ಯತಿಥಿ ಅಂಗವಾಗಿ ಸಾಮಾನು ತರಲು ಪಟ್ಟಣಕ್ಕೆ ಹೋಗಿದ್ದಾಗ ಈಕೆ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಮನೆಯವರು ರಾತ್ರಿ ವಾಪಾಸ್ ಆದಾಗ ಅರ್ಪಿತಾ ಅತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.ಸುದ್ದಿ ತಿಳಿದ ಹುಣಸೂರು ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos