ಒಂದೇ ವೇದಿಕೆಯಲ್ಲಿ ಒಂದಾಗಿ ಕಾಣಿಸಿಕೊಂಡ ಬದ್ದ ವೈರಿಗಳು

ಒಂದೇ ವೇದಿಕೆಯಲ್ಲಿ ಒಂದಾಗಿ ಕಾಣಿಸಿಕೊಂಡ ಬದ್ದ ವೈರಿಗಳು

ಕೆ.ಆರ್.ಪುರ, ನ. 17: ವಿಧಾನಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಚುನಾವಣಾ ಪೂರ್ವಭಾವಿ ಸಭೆ ಇಂದು ಖಾಸಗಿ ಕಲ್ಯಾಣ ಮಂಟಪದಲ್ಲಿ ನಡೆದಿದ್ದು, ಇಷ್ಟು ದಿನ ಬದ್ದ ವೈರಿಗಳಾಗಿದ್ದ ಮಾಜಿ ಶಾಸಕರಾದ ಬೈರತಿ ಬಸವರಾಜ್ ಹಾಗೂ ನಂದೀಶ್ ರೆಡ್ಡಿ ಒಂದೇ ವೇದಿಕೆಯಲ್ಲಿ ಒಂದಾಗುವ ಮೂಲಕ ಗೆಲುವಿನ ಸಂದೇಶವನ್ನು ಸಾರಿದ್ದಾರೆ.

ಬಿಜೆಪಿಯ ಗಟಾನುಘಟಿ ನಾಯಕರುಗಳು ಹಾಗೂ ಕಾಂಗ್ರೆಸ್ಗೆ ಕೈಕೊಟ್ಟು ಕಮಲ ಹಿಡಿದಿರುವ ಮಾಜೆ ಶಾಸಕ ಹಾಗೂ ಕೆ.ಆರ್.ಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬೈರತಿ ಬಸವರಾಜ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡದ್ದು, ಕೆ.ಆರ್.ಪುರ ಕ್ಷೇತ್ರದಲ್ಲಿ ನಡೆದ ಬಿಜೆಪಿ ಪಕ್ಷದ ಚುನಾವಣಾ ಪೂರ್ವಭಾವಿ ಸಭೆ ನಡೆಯಿತು.

ಇಂದು ಬಿಜೆಪಿ ಅಭ್ಯರ್ಥಿ ಬಸವರಾಜ ನಾಮಪತ್ರ ಸಲ್ಲಿಸುವ ಹಿನ್ನೆಲೆಯಲ್ಲಿ ಕಾರ್ಯಕರ್ತರನ್ನು ಆಹ್ವಾನಿಸುವ ಸಲುವಾಗಿ ಹಮ್ಮಿಕೊಂಡಿದ್ದ ಸಭೆಯಲ್ಲಿ ಇಷ್ಟು ದಿನ ಬದ್ದ ವೈರಿಗಳಾಗಿದ್ದ ನಂದೀಶ್ ರೆಡ್ಡಿ ಹಾಗೂ ಬೈರತಿ ಬಸವರಾಜ್ ಒಂದಾಗಿರುವುದು ಬಿಜೆಪಿ ಗೆಲುವನ್ನು ಖಚಿತಪಡಿಸಿದ್ದಾರೆ.

ಇದೇ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡ, ಆರ್. ಅಶೋಕ್, ಶಾಸಕರಾದ ಅರವಿಂದ ಲಿಂಬಾವಳಿ, ವಿಶ್ವನಾಥ್, ಸತೀಶ್ ರೆಡ್ಡಿ, ಪೂರ್ಣಿಮ ಶ್ರೀನಿವಾಸ್ ಸೇರಿದಂತೆ ಘಟಾನುಘಟಿ ನಾಯಕರುಗಳೆ ಭಾಗವಹಿಸಿದ್ದು, ಈ ಭಾರಿ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದವರಿಗೆ ಟೇಬಲ್ ಹಾಕುವುದಕ್ಕು ಕಾರ್ಯಕರ್ತರು ಸಿಗುವುದಿಲ್ಲವೆಂದು ವಾಗ್ದಾಳಿ ನಡೆಸಿದರು.

ಒಟ್ಟಾರೆ ರಾಜ್ಯದಲ್ಲಿ ಉಪ ಚುನಾವಣೆ ಕಾವು ರಂಗೇರುತ್ತಿದ್ದು, ಇತ್ತ ಕೆ.ಆರ್.ಪುರ ಕ್ಷೇತ್ರದಲ್ಲಿ ಬದ್ದ ವೈರಿಗಳಾಗಿದ್ದ ಬೈರತಿ ಬಸವರಾಜ್ ಹಾಗೂ ನಂದೀಶ್ ರೆಡ್ಡಿ ಒಂದಾಗಿರುವುದರಿಂದ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಅಟಕ್ಕುಂಟು ಲೆಕ್ಕಕ್ಕಿಲ್ಲದಂತಾಗಿದೆ.

ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯರಾದ ಶ್ರೀಕಾಂತ್, ಜಯ ಪ್ರಕಾಶ್, ಎಸ್.ಜಿ.ನಾಗರಾಜ್, ಸುರೇಶ್, ಪದ್ಮಾವತಿ ಶ್ರೀನಿವಾಸ್, ಮುಖಂಡರಾದ ಬಾಕ್ಸರ್‌ ನಾಗರಾಜ್, ಮಹೇಂದ್ರ ಮೋದಿ, ಶಾಂತ ಕೃಷ್ಣಮೂರ್ತಿ, ಸುಗುಮಾರ್, ಅಂತೋನಿ ಸ್ವಾಮಿ, ವೀರನ್ನ, ಮನೋಜ್, ಶಿವಪ್ಪ ಸೇರಿದಂತೆ ಹಲವಾರು ಹಾಜರಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos