ಬೆಂಗಳೂರು, ಮಾ. 13, ನ್ಯೂಸ್ ಎಕ್ಸ್ ಪ್ರೆಸ್: ದೇಶಿ ಟಿ20 ಟೂರ್ನಮೆಂಟ್ ಸೈಯದ್ ಮುಷ್ತಾಕ್ ಅಲಿ ಟ್ರೋಫಿಗಾಗಿ ಕರ್ನಾಟಕ ಹಾಗೂ ಮಹಾರಾಷ್ಟ್ರ ಅಂತಿಮ ಹಣಾಹಣಿಯಲ್ಲಿ ಸೆಣಸಲಿವೆ.
ಇದೇ ಮೊದಲ ಬಾರಿಗೆ ಫೈನಲ್ ತಲುಪಿರುವ ಕರ್ನಾಟಕವು, ಚೊಚ್ಚಲ ಪ್ರಶಸ್ತಿ ಗೆಲ್ಲುವ ಕನಸು ಕಾಣುತ್ತಿದೆ. ಇದೇ ವೇಳೆ ಕರ್ನಾಟಕದ ಮಹಿಳೆಯರ ತಂಡ ಕೂಡಾ ದೇಶಿ ಟಿ20 ಲೀಗ್ ನ ಫೈನಲ್ ಸೇರಿದ್ದು, ಪಂಜಾಬ್ ವಿರುದ್ಧ ಸೆಣೆಸಲು ಸಜ್ಜಾಗಿದೆ.
ಕೆ. ರಕ್ಷಿತಾ ಸಾರಥ್ಯದ ಕರ್ನಾಟಕ ತಂಡವು ಲೀಗ್ ಹಂತದಲ್ಲಿ ಅಗ್ರಸ್ಥಾನಿಯಾಗಿ ಸೂಪರ್ ಲೀಗ್ ಹಂತ ತಲುಪಿತ್ತು. ಸೂಪರ್ ಲೀಗ್ ಹಂತದಲ್ಲಿ ಆಡಿದ 4 ಪಂದ್ಯಗಳಲ್ಲಿ 3ರಲ್ಲಿ ಗೆದ್ದು, 1ರಲ್ಲಿ ಸೋತು 12 ಅಂಕದೊಂದಿಗೆ ಬಿ ಗುಂಪಿನಲ್ಲಿ ಅಗ್ರಸ್ಥಾನ ಪಡೆದು ಫೈನಲ್ ತಲುಪಿದೆ.
ಅಂತಿಮ ಸೂಪರ್ ಲೀಗ್ ಪಂದ್ಯದಲ್ಲಿ ರಣಜಿ ಚಾಂಪಿಯನ್ ವಿದರ್ಭ ತಂಡವನ್ನು 6 ವಿಕೆಟ್ ಗಳಿಂದ ಸೋಲಿಸಿದ ಕರ್ನಾಟಕ ತಂಡವು, 13 ವರ್ಷಗಳ ಇತಿಹಾಸದಲ್ಲಿ ಮೊದಲ ಬಾರಿಗೆ ಪ್ರಶಸ್ತಿ ಸುತ್ತಿಗೇರಿತು. ಮಾ.14ರಂದು ನಡೆಯಲಿರುವ ಫೈನಲ್ ಪಂದ್ಯದಲ್ಲಿ ಮನೀಶ್ ಪಾಂಡೆ ಪಡೆ ವಿರುದ್ಧ ಮಹಾರಾಷ್ಟ್ರ ಸೆಣಸಲಿದೆ.
ಕನ್ನಡಿಗ ಗಣೇಶ್ ಸತೀಶ್ ಸಾರಥ್ಯದ ವಿದರ್ಭ ಮೊದಲು ಬ್ಯಾಟಿಂಗ್ ಮಾಡಿ 7 ವಿಕೆಟ್ ಕಳೆದುಕೊಂಡು 138 ರನ್ ಗಳಿಸಿತು. ಪ್ರತಿಯಾಗಿ ಕರ್ನಾಟಕ ತಂಡ 19.2 ಓವರ್ಗಳಲ್ಲಿ 4 ವಿಕೆಟ್ ಗೆ 140 ರನ್ ಗಳಿಸಿ ಜಯದ ನಗೆ ಬೀರಿತು.