ಹುಬ್ಬಳ್ಳಿ, ಏ. 23, ನ್ಯೂಸ್ ಎಕ್ಸ್ ಪ್ರೆಸ್: ರಾಜ್ಯದಲ್ಲಿ 2ನೇ ಹಂತದ ಮತದಾನ ಇಂದು ಬೆಳಗ್ಗೆ 7 ಗಂಟೆಯಿಂದ ಪ್ರಾರಂಭವಾಗಿದ್ದು, ಹುಬ್ಬಳ್ಳಿ ಲೋಕಸಭಾ ಕ್ಷೇತ್ರದಲ್ಲಿ ತನ್ನ ತಾಯಿ ಸತ್ತ ನೋವಿನಲ್ಲೂ ಮಗ ಮತದಾನ ಮಾಡುವ ಮೂಲಕ ಕರ್ತವ್ಯ ಪ್ರಜ್ಞೆ ಮೆರೆದಿದ್ದಾರೆ.
ಇಂದು ಮುಂಜಾನೆ ಹುಬ್ಬಳ್ಳಿಯ ಮಡಿವಾಳ ನಗರದ ನಿವಾಸಿಗಳಾದ ಸಿ.ಎನ್. ನಾಯಕ ಅವರ ತಾಯಿ ವಿಮಾಲಾ ನಾಯಕ(89) ಕೊನೆಯುಸಿರೆಳೆದರು. ಅಂಕೋಲಾದಲ್ಲಿ ವಾಸಿಸುತ್ತಿದ್ದ ತಾಯಿಯ ಸಾವಿನ ಸುದ್ದಿ ಬರಸಿಡಿಲಿನಂತೆ ಬಂದೆರಗಿತು.
ಆದರೆ ಸಿ.ಎನ್.ನಾಯಕ್ ಹಾಗೂ ಅವರ ಪತ್ನಿ ಇಂದಿರಾ ನಾಯಕ ಸಾವಿನ ನೋವಿನಲ್ಲೂ ಮತಗಟ್ಟೆಗೆ ಬಂದು ತಮ್ಮ ಹಕ್ಕು ಚಲಾವಣೆ ಮಾಡಿ ಅಂತ್ಯಸಂಸ್ಕಾರಕ್ಕೆ ಅಂಕೋಲಾಕ್ಕೆ ತೆರಳಿದರು. ಈ ಮೂಲಕ ಭಾರತೀಯ ಪ್ರಜೆಯ ಜವಾಬ್ದಾರಿ ಮೆರೆದರು.