ಚೆನ್ನೈ, ಆ. 23 : ಶ್ರೀಲಂಕಾದಿಂದ ಸುಮಾರು 6 ಮಂದಿ ಉಗ್ರರು ತಮಿಳುನಾಡಿಗೆ ನುಸುಳಿದ್ದಾರೆ ಎಂದು ಕೇಂದ್ರ ಗುಪ್ತಚರ ಇಲಾಖೆ ಮಾಹಿತಿ ನೀಡಿದೆ. , ತಮಿಳುನಾಡಿನಾದ್ಯಂತ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಪಾಕಿಸ್ತಾನ ಮೂಲದ ಲಷ್ಕರ್ ಇ ತೊಯ್ಬಾ ಉಗ್ರ ಸಂಘಟನೆಯ 6 ಮಂದಿ ಉಗ್ರರು ಸಮುದ್ರ ಮಾರ್ಗ ತಮಿಳುನಾಡಿಗೆ ನುಸುಳಿದ್ದಾರೆ ಎನ್ನಲಾಗಿದೆ. ಕೇಂದ್ರ ಗುಪ್ತಚರ ಇಲಾಖೆ ಉಗ್ರರ ನುಸುಳಿವಿಕೆ ಕುರಿತು ಮಾಹಿತಿ ನೀಡಿದೆ. ಹೀಗಾಗಿ ತಮಿಳುನಾಡಿನಾದ್ಯಂತ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹೇಳಿದ್ದಾರೆ.
ಅಂತೆಯೇ ಸಾರ್ವಜನಿಕರು ಅನುಮಾನಾಸ್ಪದವಾಗಿ ತಿರುಗಾಡುವ ವ್ಯಕ್ತಿಗಳನ್ನು ಕಂಡಕೂಡಲೇ ಪೊಲೀಸರಿಗೆ ಮಾಹಿತಿ ನೀಡಿ ಎಂದು ಮನವಿ ಮಾಡಿದ್ದಾರೆ. ಇನ್ನು ಬಂದರು ನಗರಗಳಾದ ರಾಜಧಾನಿ ಚೆನ್ನೈ ಮತ್ತು ಕೊಯಮತ್ತೂರಿನಲ್ಲಿ ಭದ್ರತೆ ಹೆಚ್ಚಿಸಲಾಗಿದ್ದು, ಹೊಟೆಲ್, ವಿಮಾನ ನಿಲ್ದಾಣ, ರೈಲ್ವೇ ನಿಲ್ದಾಣ, ಥಿಯೇಟರ್ ಗಳು, ಶಾಪಿಂಗ್ ಮಾಲ್ ಗಳು, ಪಾರ್ಥನಾ ಮಂದಿರಗಳ ಮೇಲೆ ತೀವ್ರ ನಿಗಾ ಇಡಲಾಗಿದೆ. ಅಂತೆಯೇ ಚೆನ್ನೈ ಮತ್ತು ಕೊಯಮತ್ತೂರು ಸಂಪರ್ಕಿಸುವ ರಸ್ತೆಗಳಲ್ಲಿ ನಾಕಾಬಂದಿ ಹಾಕಲಾಗಿದ್ದು, ಪ್ರತೀ ವಾಹನಗಳನ್ನು ತೀವ್ರ ತಪಾಸಣೆಗೆ ಒಳಪಡಿಸಲಾಗುತ್ತಿದೆ.