ರಾಯಚೂರು, ಸೆ. 27 : ರಾಯಚೂರಿನ ಮಸ್ಕಿ ತಾಲೂಕಿ ಬಸಾಪುರ ಗ್ರಾಮದಲ್ಲಿ ವಿದ್ಯುತ್ ತಂತಿ ತಗುಲಿ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ್ದಾನೆ.
ಮೃತ ವಿದ್ಯಾರ್ಥಿಯನ್ನು ಅನಿಲ್ ಎಂದು ಗುರುತಿಸಲಾಗಿದೆ. ಮೃತಪಟ್ಟ ವಿದ್ಯಾರ್ಥಿಯು ಸರ್ಕಾರಿ ಶಾಲೆಯಲ್ಲಿ 6ನೇ ತರಗತಿ ಓದುತ್ತಿದ್ದ ಎನ್ನಲಾಗಿದೆ. ಶಾಲೆ ಆವರಣದಲ್ಲಿ ಹಾದು ಹೋದ ವಿದ್ಯುತ್ ತಂತಿ ತಗುಲಿ ಘಟನೆ ನಡೆದಿದ್ದು, ಕವಿತಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.