ಕಾಲುವೆಗೆ ಹಾರಿ ಆತ್ಮಹತ್ಯೆಗೆ ಶಿಕ್ಷಕಿ

ಕಾಲುವೆಗೆ ಹಾರಿ ಆತ್ಮಹತ್ಯೆಗೆ ಶಿಕ್ಷಕಿ

ದಾವಣಗೆರೆ : ಕೌಟುಂಬಿಕ ಕಲಹದಿಂದ ಬೇಸತ್ತು, ಶಿಕ್ಷಕಿಯೊಬ್ಬರು ತನ್ನ ಇಬ್ಬರು ಮಕ್ಕಳೊಂದಿಗೆ ಕಾಲುವೆಗೆ ಹಾರಿ, ಆತ್ಮಹತ್ಯೆಗೆ ಶರಣಾಗಿರುವ ಘಟನೆ, ನಗರದಲ್ಲಿ ನಡೆದಿದೆ.

ದಾವಣಗೆರೆ ಹೊರವಲಯದ ಹೆಚ್ ಕಲ್ಪನಹಳ್ಳಿ ಬಳಿಯ ತುಂಗಭದ್ರ ಕಾಲುವೆಗೆ ಶಿಕ್ಷಕಿ ಶ್ರೀದೇವಿ, ತನ್ನ ಇಬ್ಬರು ಮಕ್ಕಳಾದಂತ ಅನುಷಾ, ನೂತನ್ ಅವರೊಂದಿಗೆ ಕಾಲುವೆಗೆ ಹಾರಿದ್ದಾಳೆ.

ವೃತ್ತಿಯಲ್ಲಿ ಪ್ರೌಢ ಶಾಲಾ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಂತ ಶ್ರೀದೇವಿ, ಪತಿಯ ಜೊತೆಗೆ ಮನೆ ಕಟ್ಟುವ ವಿಚಾರಕ್ಕಾಗಿ ಜಗಳ ಮಾಡಿಕೊಂಡಿದ್ದಾಳೆ. ಇದೇ ಜಗಳದಿಂದ ವೈಮನಸ್ಸು ಉಂಟಾಗಿ ತನ್ನ ಇಬ್ಬರು ಮಕ್ಕಳ ಜೊತೆಗೆ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.

ಫ್ರೆಶ್ ನ್ಯೂಸ್

Latest Posts

Featured Videos