ನವದೆಹಲಿ: ‘ಹಿಂದೂ ಹುಡುಗಿ ಮೈ ಮುಟ್ಟಿದ ಕೈ ಇರಬಾರದು’ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆಗೆ ಕಾಂಗ್ರೆಸ್ ನಾಯಕ ತೆಹ್ಸೀನ್ ಪೂನಾವಾಲಾ ಬಹಿರಂಗ ಸವಾಲು ಹಾಕಿದ್ದಾರೆ.
ನಾನು ನನ್ನ ಹಿಂದೂ ಪತ್ನಿಯ ಮೈಯನ್ನು ಮುಟ್ಟಿದ್ದೇನೆ. ನಿಮ್ಮ ಕೈಯಲ್ಲಿ ಏನು ಮಾಡೋಕೆ ಆಗುತ್ತೆ, ಇದು ಒಂದು ಧೈರ್ಯ ಸರ್ ಎಂದು ತೆಹ್ಸೀನ್ ಪೂನಾವಾಲ ಹೆಗಡೆಗೆ ಟ್ವೀಟ್ ಮಾಡಿ ಸವಾಲೆಸೆದಿದ್ದಾರೆ.
ಇನ್ನು ಅನಂತ್ ಕುಮಾರ್ ಹೆಗಡೆ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ್ದ ಕಾಂಗ್ರೆಸ್ ರಾಜ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಅವರು, ‘ಹೆಗಡೆಯವರೇ ಇನ್ನೂ ಕಾಲ ಮಿಂಚಿಲ್ಲ, ಘನ ವ್ಯಕ್ತಿಯಾಗಲು ಪ್ರಯತ್ನಿಸಿ’ ಎಂದು ಟೀಕಿಸಿದ್ದರು.
ಸದ್ಯ ಹೆಗಡೆಯವರ ಈ ಹೇಳಿಕೆ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಹವಲವರಿಂದ ವ್ಯಾಪಕ ಟೀಕೆಗಳು ವ್ಯಕ್ತವಾಗುತ್ತಿವೆ.