ಬೆಂಗಳೂರು, ಮಾ, 26, ನ್ಯೂಸ್ ಎಕ್ಸ್ ಪ್ರೆಸ್: ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಇಂದು ನಾಮಪತ್ರ ಸಲ್ಲಿಸಿದರು. ಈ ವೇಳೆ ಬಿಜೆಪಿ ಮುಖಂಡರು ಗೈರಾಗಿದ್ದಾರೆ.
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ತೇಜಸ್ವಿ ಸೂರ್ಯ ಸ್ಪರ್ಧಿಸುತ್ತಿದ್ದು, ಇಂದು ಮಧ್ಯಾಹ್ನ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೂ ಮುನ್ನ ತೇಜಸ್ವಿ ಸೂರ್ಯ ಗಿರಿನಗರದ ಗಣೇಶ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ತೇಜಸ್ವಿ ಸೂರ್ಯ ನಾಮಪತ್ರ ಸಲ್ಲಿಸುವ ವೇಳೆ ಬಿಜೆಪಿಯ ಶಾಸಕರಾದ ಸೋಮಣ್ಣ, ಸತೀಶ್ ರೆಡ್ಡಿ ಹಾಗೂ ಆರ್. ಅಶೋಕ್ ಗೈರಾಗಿದ್ದು, ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ತೇಜಸ್ವಿ ನಾಮಪತ್ರ ಸಲ್ಲಿಸುವಾಗ ಅವರಿಗೆ ಎನ್.ಆರ್.ರಮೇಶ್ , ವೆಂಕಟೇಶ್ ಹಾಗೂ ಕಾರ್ಯಕರ್ತರು ಮಾತ್ರ ಸಾಥ್ ನೀಡಿದರು.