ಬೆಂಗಳೂರು, ಏ. 5, ನ್ಯೂಸ್ ಎಕ್ಸ್ ಪ್ರೆಸ್: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಬಿಡುವಿಲ್ಲದ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿರುವ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಇಂದು ಚಿಕ್ಕ ಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರದ ಭಾಗವಾಗಿ ರೋಡ್ ಶೋ ಮತ್ತು ಬೈಕ್ ರ್ಯಾಲಿ ನಡೆಸುವ ಮೂಲಕ ಮತಯಾಚನೆ ನಡೆಸಿದರು.
ಊರ್ವಶಿ ಚಿತ್ರಮಂದಿರದಿಂದ ಆರಂಭಗೊಂಡ ರೋಡ್ ಶೋ ಲಾಲ್ ಬಾಗ್ ರಸ್ತೆಯ ಪ್ರಮುಖ ಬೀದಿಗಳಲ್ಲಿ, ಸಂಚರಿಸಿ ಲಾಲ್ ಬಾಗ್ ವೆಸ್ಟ್ ಗೇಟ್, ಮಾರ್ಗವಾಗಿ ಅಶೋಕ ಪಿಲ್ಲರ್ ವರೆಗೂ ನಡೆದ ಪ್ರಚಾರದ ರ್ಯಾಲಿಗೆ ಅಭೂತಪೂರ್ವ ಬೆಂಬಲ ವ್ಯಕ್ತವಾಯಿತು.
ಶಾಸಕ ಉದಯ ಗರುಡಾಚಾರ್, ಬೆಂಗಳೂರು ನಗರ ಬಿಜೆಪಿ ಅಧ್ಯಕ್ಷರಾದ ಸದಾಶಿವ, ಸತ್ಯರಾಜ್, ನಗರ ಬಿಜೆಪಿ ಪದಾಧಿಕಾರಿಗಳು ಸೇರಿದಂತೆ ಬಿಜೆಪಿ ಮುಖಂಡರು, ಕಾರ್ಯಕರ್ತರು ಪ್ರಚಾರ ಕಾರ್ಯದಲ್ಲಿ ಭಾಗವಹಿಸಿದ್ದರು.