ವಾರಾಣಸಿ, ಏ. 29, ನ್ಯೂಸ್ ಎಕ್ಸ್ ಪ್ರೆಸ್: ಪ್ರಧಾನಿ ನರೇಂದ್ರ ಮೋದಿ ಅವರು ಸ್ಪರ್ಧಿಸುತ್ತಿರುವ ಉತ್ತರ ಪ್ರದೇಶದ ವಾರಣಾಸಿ ಕ್ಷೇತ್ರದಲ್ಲಿ ಸಮಾಜವಾದಿ ಪಕ್ಷ ಮತ್ತು ಬಹುಜನ ಸಮಾಜ ಪಕ್ಷದ ಮೈತ್ರಿಕೂಟ ಅಚ್ಚರಿಯ ನಿರ್ಧಾರ ಪ್ರಕಟಿಸಿದೆ. ತನ್ನ ಅಭ್ಯರ್ಥಿಯನ್ನು ಬದಲಿಸಿರುವ ಮೈತ್ರಿಕೂಟ, ಶಾಲಿನಿ ಯಾದವ್ ಬದಲು, ಪಕ್ಷೇತರ ಅಭ್ಯರ್ಥಿಯಾಗಿದ್ದ ತೇಜ್ ಬಹದ್ದೂರ್ ಯಾದವ್ ಅವರಿಗೆ ಟಿಕೆಟ್ ನೀಡಿದೆ. ವಜಾಗೊಂಡ ಬಿಎಸ್ಎಫ್ ಸೈನಿಕ ವಾರಣಾಸಿಯಲ್ಲಿ ಮೋದಿ ವಿರುದ್ಧ ಸ್ಪರ್ಧೆ ಸೇನೆಗೆ ನೀಡುವ ಆಹಾರದ ಗುಣಮಟ್ಟದ ಬಗ್ಗೆ ದೂರಿ ಅಂತರ್ಜಾಲದಲ್ಲಿ ವಿಡಿಯೋ ಹರಿಬಿಟ್ಟ ಕಾರಣಕ್ಕೆ ಸೇವೆಯಿಂದ ವಜಾಗೊಂಡಿದ್ದ ಬಿಎಸ್ ಎಫ್ ಮಾಜಿ ಯೋಧ ತೇಜ್ ಬಹದ್ದೂರ್ ಯಾದವ್ ಅವರನ್ನು ತನ್ನ ಅಭ್ಯರ್ಥಿಯನ್ನಾಗಿ ಎಸ್ಪಿ-ಬಿಎಸ್ಪಿ ಘೋಷಿಸಿದೆ. ಮೇ 19 ರಂದು ಕೊನೆಯ ಹಂತದಂದು ವಾರಣಾಸಿಯಲ್ಲಿ ಮತದಾನ ನಡೆಯಲಿದ್ದು, ನಾಮಪತ್ರ ಸಲ್ಲಿಕೆಗೆ ಇಂದೇ ಕೊನೆಯ ದಿನವಾಗಿದೆ.