ಮಂಡ್ಯ: ಹೊಸ ವರ್ಷ ಹಿನ್ನೆಲೆಯಲ್ಲಿ ರಾಜ್ಯದ್ಯಾಂತ ಎಲ್ಲರೂ ದೇವಸ್ಥಾನಗಳಿಗೆ ಹೋಗುತ್ತಿದ್ದಾರೆ. ಅದರಲ್ಲಿ ಸಹ ಇನ್ನೇನು ಎಂದಿಗಿಂತ ಇಂದು ಅತಿ ಹೆಚ್ಚು ಭಕ್ತ ಸಾಗರಗಳೇ ದೇವಸ್ಥಾನದ ಹರಿದು ಬರುತ್ತಿದ್ದಾರೆ. ಮಂಡ್ಯ ಜಿಲ್ಲೆಯ ಪ್ರಮುಖ ದೇವಸ್ಥಾನಗಳಲ್ಲಿ ಕೂಡ ಇವತ್ತು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಕಾಣಿಸಿಕೊಂಡಿದ್ದಾರೆ. ಮೇಲುಕೋಟೆ ಚೆಲುವರಾರಾಯಣ ಸ್ವಾಮಿ ದೇಗುಲದಲ್ಲಿ ಮಾಸ್ಕ್ ಕಡ್ಡಾಯವಿದೆ ಕಾರಣ ಕೊರೋನಾ ಜಾಸ್ತಿ ಆಗುತ್ತಿರುವುದರಿಂದ. ಈ ಕಡೆಗೆ ಶ್ರೀರಂಗಪಟ್ಟಣ ನಿಮಿಷಾಂಬ ದೇವಿ ದೇಗುಲ ರಂಗನಾಥ ದೇವಸ್ಥಾನ ಪ್ರಮುಖ ದೇವಸ್ಥಾನಗಳಿಗೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಬರುತ್ತಿದ್ದಾರೆ. ಅದು ಸಹ ಕುಟುಂಬ ಸಮೇತರಾಗಿ ಆಗಮಿಸಿ ದರ್ಶನವನ್ನು ಪಡೆದುಕೊಳ್ಳುತ್ತಿದ್ದಾರೆ.