ಉಗ್ರರರಿಂದ ಆತಂಕ, ದೇಶದ ಕರಾವಳಿಯಲ್ಲೂ ಕಟ್ಟೆಚ್ಚರ

ಉಗ್ರರರಿಂದ ಆತಂಕ, ದೇಶದ ಕರಾವಳಿಯಲ್ಲೂ ಕಟ್ಟೆಚ್ಚರ

ಮಂಗಳೂರು . 27, ನ್ಯೂಸ್ ಎಕ್ಸ್ ಪ್ರೆಸ್:  ಶ್ರೀಲಂಕಾದಲ್ಲಿ ಉಗ್ರರ ಅಡಗುತಾಣಗಳ ಮೇಲೆ ದಾಳಿ ನಡೆಯುತ್ತಿರುವ ಕಾರಣ ಉಗ್ರರು ಸಮುದ್ರದ ಮೂಲಕ ದಾಳಿ ನಡೆಸುವ ಸಾಧ್ಯತೆ ಇರುವ ಕಾರಣ ಭಾರತದಲ್ಲೂ ಕಟ್ಟೆಚ್ಚರವಹಿಸಲಾಗಿದೆ.

ಈ ಪರಿಣಾಮ ದೇಶದ ಕರಾವಳಿಯಲ್ಲೂ ಕಟ್ಟೆಚ್ಚರ ವಹಿಸಲಾಗುತ್ತಿದೆ. ಉಗ್ರರು ಸಮುದ್ರ ಮಾರ್ಗದ ಮೂಲಕ ದಕ್ಷಿಣ ಭಾರತ ಪ್ರವೇಶಿಸುವ ಗುಪ್ತಚರ ಮಾಹಿತಿ ಇರುವ ಹಿನ್ನೆಲೆಯಲ್ಲಿ ಆಳ ಸಮುದ್ರದಲ್ಲಿ ನಡೆಯುವ ಚಟುವಟಿಕೆ ಗಳ ಮೇಲೆ ಹದ್ದಿನ ಕಣ್ಣು ಇರಿಲಾಗಿದೆ .

ಸಮುದ್ರದಲ್ಲಿ ಸಂಚರಿಸುವ ಅನುಮಾನಾಸ್ಪದ ದೋಣಿಗಳನ್ನು ತಡೆದು ಶೋಧ ನಡೆಸಲಾಗುತ್ತಿದೆ . ಭಾರತೀಯ ನೌಕಾ ಪಡೆ, ತಟರಕ್ಷಣಾ ಪಡೆಯ ಹಡಗುಗಳು ರಾತ್ರಿ ಹಗಲೆನ್ನದೆ ಸಮುದ್ರದಲ್ಲಿ ಗಸ್ತು ತಿರುಗುತ್ತಿವೆ .

ಶ್ರೀಲಂಕಾ ಸರಣಿ ಸ್ಫೋಟದ ಬಳಿಕ ಇತ್ತೀಚಿನ ದಿನಗಳಲ್ಲಿ ಉದ್ಭವಿಸಿರುವ ಆತಂಕ ಪರಿಸ್ಥಿತಿಯ ಕಾರಣ ರಾಜ್ಯದ ಕರಾವಳಿ ಕಾವಲು ಪಡೆಯ ಪೊಲೀಸರಿಂದ ಸಮುದ್ರಗಸ್ತು ತೀವ್ರಗೊಳಿಸಲಾಗಿದೆ . ಈ ಹಿನ್ನೆಲೆಯಲ್ಲಿ ಐಎಸ್ ಡಿ ಡಿಜಿಪಿ ಎ.ಎಂ. ಪ್ರಸಾದ್ ಹಾಗು ಹಿರಿಯ ಅಧಿಕಾರಿಗಳು ಉಡುಪಿ ಜಿಲ್ಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos