ಮೈತ್ರಿ ಸರ್ಕಾರಕ್ಕೆ ಅಭದ್ರತೆ ಉಂಟಾಗುವ ಪ್ರಶ್ನೆಯೇ ಇಲ್ಲ: ಮುಖ್ಯಮಂತ್ರಿ ಎಚ್‍ಡಿಕೆ

ಮೈತ್ರಿ ಸರ್ಕಾರಕ್ಕೆ ಅಭದ್ರತೆ ಉಂಟಾಗುವ ಪ್ರಶ್ನೆಯೇ ಇಲ್ಲ: ಮುಖ್ಯಮಂತ್ರಿ ಎಚ್‍ಡಿಕೆ

 ಮೈಸೂರು: ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರಕ್ಕೆ ಅಭದ್ರತೆ ಉಂಟಾಗುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬೈ ಹಾಗೂ ದೆಹಲಿಯಲ್ಲಿರುವ ಶಾಸಕರು ತಮ್ಮೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ.

ವೈಯಕ್ತಿಕ ಕೆಲಸಕ್ಕಾಗಿ ಅವರು ನನಗೆ ಹೇಳಿಯೇ ಹೋಗಿದ್ದಾರೆ. ಹೀಗಾಗಿ ಸರ್ಕಾರ ಅಸ್ಥಿರಗೊಳ್ಳುವ ಪ್ರಶ್ನೆಯೇ ಇಲ್ಲ. ಬಿಜೆಪಿ ಯಾರನ್ನು ಸಂಪರ್ಕಿಸಿ, ಅವರಿಗೆ ಎಷ್ಟೆಷ್ಟು ದೊಡ್ಡ ದೊಡ್ಡ ಉಡುಗೊರೆಯ ಆಮಿಷವೊಡ್ಡಿದ್ದಾರೆಂಬ ಸಂಪೂರ್ಣ ಮಾಹಿತಿ ನನಗಿದೆ ಎಂದು ತಿಳಿಸಿದರು.

ಮಾಧ‍್ಯಮಗಳು 12ಶಾಸಕರು ಬಿಜೆಪಿಗೆ ಹೊರಟ್ಟಿದ್ದಾರೆ, 14 ಶಾಸಕರು ಹೊರಟಿದ್ದಾರೆಂಬ ಸುಳ್ಳು ಸುದ್ದಿ ಪ್ರಕಟಿಸಲಾಗುತ್ತಿದೆ. ಅವರಿಗೆ ಈ ಸುದ್ದಿ ಯಾರು ಕೊಟ್ಟಿದ್ದಾರೋ ಗೊತ್ತಿಲ್ಲ. ಯಾರಿಗೆ ಯಾವ ಲಾಭವಾಗುತ್ತದೆಯೋ ಗೊತ್ತಿಲ್ಲ ಮಾಧ್ಯಮಗಳ ಕುರಿತು ಬೇಸರ ವ್ಯಕ್ತಪಡಿಸಿದರು.

ಮೂರು ಮಂದಿ ಶಾಸಕರು ತಮ್ಮ ಸಂಪರ್ಕದಲ್ಲಿದ್ದಾರೆ. ದೆಹಲಿ ಹಾಗೂ ಮುಂಬೈಗೆ ಹೋಗಿರುವ ಶಾಸಕರು ತಮ್ಮ ಸ್ನೇಹಿತರೇ ಆಗಿದ್ದಾರೆ. ಸರ್ಕಾರ ಭದ್ರವಾಗುವುದಾದರೆ ತಾವು ಇಷ್ಟೊಂದು ಆರಾಮವಾಗಿರಲು ಸಾಧ್ಯವಾಗಿರುತ್ತಿತ್ತೇ ಎಂದು ಪ್ರಶ್ನಿಸಿದರು.

ಫ್ರೆಶ್ ನ್ಯೂಸ್

Latest Posts

Featured Videos