ಮಹದೇವಪುರ, ನ. 16: ಹಿಂದಿನ ಸಮ್ಮಿಶ್ರ ಸರ್ಕಾರದಲ್ಲಿ ಕುಂಠಿತವಾಗಿದ್ದ ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳನ್ನು ಇಂದಿನ ಬಿಜೆಪಿ ಸರ್ಕಾರದಲ್ಲಿ ಅಭಿವೃದ್ಧಿ ಪಡಿಸುತ್ತಿರುವುದಾಗಿ ಎಂದು ಸ್ಥಳೀಯ ಶಾಸಕ ಅರವಿಂದ್ ಲಿಂಬಾವಳಿ ತಿಳಿಸಿದರು.
ಕ್ಷೇತ್ರದ ಬೆಳಂದೂರು ವಾರ್ಡಿನ ದೊಡ್ಡ ಕನ್ನಳ್ಳಿ, ಕಸವನಹಳ್ಳಿ, ಹರಳೂರು, ಬೆಳಂದೂರು ಭಾಗಗಳಲ್ಲಿ ರಸ್ತೆ, ಚರಂಡಿ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಮಾಡಿ ಮಾತನಾಡಿದ ಅವರು, ಹಿಂದಿನ ಸಮ್ಮಿಶ್ರ ಸರ್ಕಾರ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡದೆ ತಾರತಮ್ಯ ಮಾಡಿದ್ದು, ಕ್ಷೇತ್ರದ ಅಭಿವೃದ್ದಿ ಕುಂಠಿತ ಗೊಂಡಿತ್ತು ಎಂದು ಹೇಳಿದರು.
ಈ ಸಂದರ್ಭದಲ್ಲಿ ಕ್ಷೇತ್ರ ಅಧ್ಯಕ್ಷ ರಾಜಾರೆಡ್ಡಿ, ಪಾಲಿಕೆ ಸದಸ್ಯೆ ಆಶಾ ಸುರೇಶ್, ಮುಖಂಡರಾದ ಸೋಮಶೇಖರ್ ರೆಡ್ಡಿ, ವಸಂತ್ ರೆಡ್ಡಿ, ಬೆಳಂದೂರು ಸುರೇಶ್, ಮಿಥುನ್ ರೆಡ್ಡಿ, ಶೇಖರ್ ರೆಡ್ಡಿ ಸೇರಿದಂತೆ ಹಲವಾರು ಮುಖಂಡರು ಹಾಜರಿದ್ದರು.