ಜಾತಿ ವ್ಯವಸ್ಥೆ ನಿಂತ ನೀರಿನಂತೆ: ಸಿಎಂ

ಜಾತಿ ವ್ಯವಸ್ಥೆ ನಿಂತ ನೀರಿನಂತೆ: ಸಿಎಂ

ಬೆಂಗಳೂರು: ನಮ್ಮ ದೇಶ, ನಮ್ಮ ಸಮಾಜಕ್ಕೆ ಅವಶ್ಯವಾಗಿದ್ದಂತಹ ಅತ್ಯುತ್ತಮ ಸಂವಿಧಾನವನ್ನು ನೀಡಿದವರು ಬಾಬಾ ಸಾಹೇಬ್ ಅಂಬೇಡ್ಕರ್. ಈ ದೇಶದ ಸಾಮಾಜಿಕ ಪರಿಸ್ಥಿತಿ, ಜಾತಿ ವ್ಯವಸ್ಥೆ ಅಂಬೇಡ್ಕರ್ ಅವರಿಗೆ ಅರ್ಥ ಆದಷ್ಟು ಬೇರೆಯವರಿಗೆ ಆಗಿರಲಿಲ್ಲವೆಂದರೆ ಅದು ಅತಿಶಯೋಕ್ತಿಯಲ್ಲ. ಜಾತಿ ವ್ಯವಸ್ಥೆ ಇದ್ದಷ್ಟೂ ಕಾಲ ಮೀಸಲಾತಿ ಇರಲೇಬೇಕು ಎಂಬುದನ್ನು ಅವರು ಬಲವಾಗಿ ನಂಬಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಯಲಹಂಕದಲ್ಲಿ ಇಂದು (ಶನಿವಾರ ಮೇ 03) ರಂದು 14 ಅಡಿಗಳ ಬಾಬಾ ಸಾಹೇಬ್ ಅಂಬೇಡ್ಕರ್ ಕಂಚಿನ ಪ್ರತಿಮೆಯನ್ನು ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, ಸಂವಿಧಾನ ರಕ್ಷಣೆಯಾದರೆ ನಮ್ಮ ಹಕ್ಕುಗಳೂ ರಕ್ಷಣೆಯಾಗುತ್ತವೆ. ಸಂವಿಧಾನ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ. ಸಂವಿಧಾನಕ್ಕೆ ಯಾವುದೇ ಧಕ್ಕೆಯಾಗದಂತೆ ನೋಡಿಕೊಳ್ಳವುದು ನಮ್ಮೆಲ್ಲರ ಕರ್ತವ್ಯ. ಜಾತಿ ವ್ಯವಸ್ಥೆ ಇದ್ದಷ್ಟೂ ಕಾಲ ಮೀಸಲಾತಿ ಇರಲೇಬೇಕು ಎಂಬುದನ್ನು ಅವರು ಬಲವಾಗಿ ನಂಬಿದ್ದರು ಎಂದರು.

ನಮ್ಮ ದೇಶದ ಜಾತಿ ವ್ಯವಸ್ಥೆಗೆ ಚಲನೆ ಇಲ್ಲ. ಆದರೆ ವರ್ಗಕ್ಕೆ ಚಲನೆಯಿದೆ. ನಮ್ಮ ಸಮಾಜದಲ್ಲಿ ಶ್ರೀಮಂತ ಬಡವನಾದರೂ, ಬಡವ ಶ್ರೀಮಂತನಾದರೂ ಕಡೆಯವರೆಗೂ ಉಳಿದು ಕೊಳ್ಳುವುದು ಹುಟ್ಟಿದ ಜಾತಿಯಲ್ಲಿ ಮಾತ್ರ. ಆದ್ದರಿಂದ ಈ ಜಾತಿ ವ್ಯವಸ್ಥೆ ನಿಂತ ನೀರಿನಂತೆ. ಇದನ್ನೂ ಓದಿ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಮಾಜಿ ಸಿಎಂ

ಇದನ್ನು ಮನಗಂಡಿದ್ದ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸ್ವಾತಂತ್ರ್ಯ ಯಶಸ್ಸನ್ನು ಕಾಣಬೇಕಾದರೆ ಈ ದೇಶದ ಅವಕಾಶ ವಂಚಿತರು, ಶೋಷಿತರು, ದೌರ್ಜನ್ಯಕ್ಕೆ ಒಳಗಾದವರಿಗೆಲ್ಲರಿಗೂ ಸಮಾನ ಅವಕಾಶಗಳು ದೊರೆತು ಅವರೆಲ್ಲರೂ ಸಾಮಾಜಿಕವಾಗಿ, ಆರ್ಥಿಕವಾಗಿ ಸಬಲರಾದಾಗ ಮಾತ್ರ ಸ್ವಾತಂತ್ರ್ಯಕ್ಕೆ ನಿಜವಾದ ಅರ್ಥ ಸಿಗುತ್ತದೆ ಎಂದು ಹೇಳಿದ್ದರು ಎಂದರು.

ಸ್ವಾತಂತ್ರ್ಯಾ ನಂತರ ಒಬ್ಬ ವ್ಯಕ್ತಿ, ಒಂದು ಮತ ಜಾರಿಗೆ ಬಂದಿದೆ. ಇದು ಈ ದೇಶದ ರಾಷ್ಟ್ರಪತಿಗಳಿಗೂ ಒಂದೇ. ಒಬ್ಬ ಪೌರಕಾರ್ಮಿಕನಿಗೂ ಒಂದೇ. ಬಸವಣ್ಣನವರು ಹೇಳಿದ್ದು ಇದನ್ನೇ. ಅಂಬೇಡ್ಕರ್ ಅವರು ಕೂಡಾ ಬಸವಣ್ಣನವರ ವಚನಗಳನ್ನು ಓದಿದ್ದರು ಎಂಬುದು ಅವರ ಬರಹಗಳಿಂದ ತಿಳಿದು ಬರುತ್ತದೆ. ಸಮಾಜದಲ್ಲಿ ಯಾವ ಕೆಲಸವೂ ಮೇಲೂ ಅಲ್ಲ, ಕೀಳೂ ಅಲ್ಲ. ಎಲ್ಲವೂ ಸಮಾನ ಎಂದೇ ಪ್ರತಿಪಾದಿಸಿದರು ಎಂದರು.

ನಮಗೆ ರಾಜಕೀಯ ಸ್ವಾತಂತ್ರ್ಯ ಸಿಕ್ಕಿದೆ ಆದರೆ ಸಾಮಾಜಿಕ ಆರ್ಥಿಕ ಸಿಕ್ಕಿಲ್ಲ. ಎಲ್ಲಿವರೆಗೂ ಇದು ಸಿಗುವುದಿಲ್ಲ ಅಲ್ಲಿಯವರೆಗೆ ಸಮಾಜದಲ್ಲಿ ಸಮಾನತೆ ಕಾಣಲು ಸಾಧ್ಯವಿಲ್ಲ. ನಮ್ಮ ಸರ್ಕಾರವು ಇದನ್ನೇ ನಂಬಿದ್ದು, ನಾವು ರೂಪಿಸುತ್ತಿರುವ ಕಾರ್ಯಕ್ರಮಳೂ ಇದೇ ಹಿನ್ನೆಲೆಯಿಂದ ಮೂಡಿಬಂದಿವೆ ಎಂದರು.

 

ಫ್ರೆಶ್ ನ್ಯೂಸ್

Latest Posts

Featured Videos