ಹಾಸನಾಂಬ ದರ್ಶನಕ್ಕೆ ವಿಧ್ಯುಕ್ತ ತೆರೆ

ಹಾಸನಾಂಬ ದರ್ಶನಕ್ಕೆ ವಿಧ್ಯುಕ್ತ ತೆರೆ

ಹಾಸನ, ಅ. 29 : ವರ್ಷಕ್ಕೊಮ್ಮೆ ಮಾತ್ರ ದರ್ಶನ ನೀಡುವ ಹಾಸನಾಂಬೆ ದರ್ಶನೋತ್ಸವ ಯಶಸ್ವಿಯಾಗಿ ಮುಗಿದಿದೆ.
ದೇವಿಯ ದರ್ಶನ ಪಡೆದ ನಂತರ ಸಚಿವ ಮಾಧುಸ್ವಾಮಿ ಸುದ್ದಿಗಾರರೊಂದಿಗೆ ಮಾತನಾಡಿ, ಯಾವುದೇ ಗೊಂದಲ ಇಲ್ಲದೆ ಉತ್ಸವ ಮುಕ್ತಾಯವಾಗಿದೆ. ಮುಂದೆಯೂ ಇದೇ ರೀತಿ ನಿರಾತಂಕ ಉತ್ಸವ ನಡೆಯಲಿ ಎಂದು ಸಚಿವರು ತಿಳಿಸಿದರು.
ಉತ್ಸವ ಯಶಸ್ವಿಯಾಗಿ ಪೂರೈಸಿದ್ದು, ಇದಕ್ಕಾಗಿ ಶ್ರಮಿಸಿದ ಎಲ್ಲಾ ಇಲಾಖೆ ಅಧಿಕಾರಿಗಳಿಗೆ ಸಚಿವರು ಅಭಿನಂದನೆ ಸಲ್ಲಿಸಿದರು.
ಮೂಲ ಸೌಲಭ್ಯ ಅಭಿವೃದ್ಧಿ ಗೆ ಒತ್ತು ನೀಡಲಾಗುವುದು. ಸರಕಾರಕ್ಕೆ, ನಾಡಿನ ಜನರಿಗೆ ಒಳ್ಳೆಯದಾಗಲಿ ಎಂದು ಬೇಡಿಕೊಂಡಿದ್ದೇನೆ ಎಂದು ಸಚಿವ ಮಾಧುಸ್ವಾಮಿ ತಿಳಿಸಿದರು.

ಫ್ರೆಶ್ ನ್ಯೂಸ್

Latest Posts

Featured Videos