ಸುಬ್ರಹ್ಮಣ್ಯ, ನ. 23 : ಧಾರ್ಮಿಕ ಪುಣ್ಯ ಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ನಿತ್ಯವೂ ಜನಸಂದಣಿ ಹೆಚ್ಚುತ್ತದೆ. ಇಲ್ಲಿ ದಿನದ 24 ಗಂಟೆ ವಿದ್ಯುತ್, ಮೊಬೈಲ್ ಸಿಗ್ನಲ್ ಇರಬೇಕಿತ್ತು. ಆದರಿಲ್ಲಿ ಬಹುತೇಕ ಸಮಯ ವಿದ್ಯುತ್ ಇರುವುದಿಲ್ಲ. ಮೊಬೈಲ್ ಸಿಗ್ನಲ್ಗಳು ಇರುವುದಿಲ್ಲ. ವಿದ್ಯುತ್ ಸಮಸ್ಯೆ ನಿವಾರಿಸಲೆಂದೇ ಮೆಸ್ಕಾಂ ಉಪವಿಭಾಗ ಕೇಂದ್ರ ತೆರೆದಿದ್ದರೂ ಪ್ರಯೋಜನ ಶೂನ್ಯ. ವಿದ್ಯುತ್ ಸಮಸ್ಯೆಯಿಂದ ಜನ ಬಸವಳಿದು ಹೋಗಿದ್ದಾರೆ. ವಿದ್ಯುತ್ ಸಮಸ್ಯೆ ಎಷ್ಟು ಜಟಿಲಗೊಂಡಿದೆ ಎಂದರೆ ಬಟ್ಟೆಗಳಿಗೆ ಇಸ್ತ್ರಿ ಹಾಕುವ ಅಂಗಡಿಯವರು ವಿದ್ಯುತ್ನ ಬದಲಾಗಿ ಗ್ಯಾಸ್ ಸಿಲಿಂಡರ್ ಅನ್ನು ಇಸ್ತ್ರಿ ಪೆಟ್ಟಿಗೆಗೆ ಬಳಸತೊಡಗಿದ್ದಾರೆ. ಅಷ್ಟು ರೋಸಿ ಹೋಗಿದ್ದಾರೆ ಇಲ್ಲಿನ ಜನತೆ.