ಚಿಕ್ಕಮಗಳೂರು: ಕಾಡಾನೆ ದಾಳಿಯಿಂದ ರೈತನೋವ ಮೃತಪಟ್ಟ ಘಟನೆ ಚಿಕ್ಕಮಗಳೂರು ತಾಲೂಕಿನ ಶಾಂತವೇರಿ ಸಮೀಪದ ಅರವಿಂದ ನಗರದಲ್ಲಿ ನಡೆದಿದೆ.
ಮೃತರನ್ನು ಅರವಿಂದ ನಗರ ನಿವಾಸಿ ಕುಮಾರ್ ನಾಯ್ಕ್( 45) ಎಂದು ಗುರುತಿಸಲಾಗಿದೆ. ಇವರು ಕಳೆದ ರಾತ್ರಿ ಹೊಲದಲ್ಲಿ ಮಲಗಿದ್ದರು. ಈ ಆನೆ ದಾಳಿ ನಡೆಸಿ ಅವರನ್ನು ಕೊಂದು ಹಾಕಿದೆ ಎಂದು ತಿಳಿದುಬಂದಿದೆ.
ಸ್ಥಳಕ್ಕೆ ಚಿಕ್ಕಮಗಳೂರು ಅರಣ್ಯಾಧಿಕಾರಿಗಳು ಭೇಟಿ ಪರಿಶೀಲನೆ ನಡೆಸಿದ್ದಾರೆ.
ಈ ನಡುವೆ ಪರಿಸರದಲ್ಲಿ ನಿರಂತರ ಕಾಡಾನೆಗಳು ದಾಳಿ ನಡೆಸುತ್ತಿದ್ದರೂ ಸೂಕ್ತ ಕ್ರಮ ಕೈಗೊಳ್ಳದಿರುವ ಅರಣ್ಯ ಇಲಾಖೆಯ ವಿರುದ್ಧ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.