ವಿದ್ಯಾರ್ಥಿ ಸಾವು

ವಿದ್ಯಾರ್ಥಿ ಸಾವು

ಚಿತ್ರದುರ್ಗ,ಡಿ. 22 : ನಗರದ ಎಸ್.ಜೆ.ಎಂ. ಫಾರ್ಮಸಿ ಕಾಲೇಜಿನಲ್ಲಿ ೫ನೇ ಸೆಮಿಸ್ಟರ್ನಲ್ಲಿ ಓದುತ್ತಿದ್ದ ಬಿ.ಫಾರ್ಮ ವಿದ್ಯಾರ್ಥಿ ಬೆಂಗಳೂರು ಮೂಲದ ಜೀವಿತ ಇಂದು ಚೆನ್ನೈನ ಮರೀನಾ ಬೀಚ್ನಲ್ಲಿ ಈಜಲು ಹೋಗಿ ಆಕಸ್ಮಿಕವಾಗಿ ಮೃತಪಟ್ಟಿರುತ್ತಾನೆ.
ಚೆನ್ನೈನ ರಾಮಚಂದ್ರ ವಿಶ್ವವಿದ್ಯಾಲಯದಲ್ಲಿ ಇಂಡಿಯನ್ ಫಾರ್ಮಸಿಟಿಕಲ್ ಕಾಂಗ್ರೆಸ್ ವತಿಯಿಂದ ದಿ. ೧೯ ರಿಂದ ೨೧ರವರೆಗೆ ಆಯೋಜಿಸಲಾಗಿದ್ದ ಕಾನ್ಫೆರೆನ್ಸ್ನಲ್ಲಿ ಭಾಗವಹಿಸಲು ಕಾಲೇಜಿನ ೮೨ ವಿದ್ಯಾರ್ಥಿಗಳು ಹಾಗು ೫ ಉಪನ್ಯಾಸಕರು ತೆರಳಿದ್ದರು ಎನ್ನಲಾಗಿದೆ.
ಕಾರ್ಯಕ್ರಮದ ನಡುವೆ ಇಬ್ಬರು ವಿದ್ಯಾರ್ಥಿಗಳು ಬೀಚ್ ವೀಕ್ಷಿಸಲು ತೆರಳಿದಾಗ ಈ ಅವಘಡ ಸಂಭವಿಸಿದೆ. ವಿದ್ಯಾರ್ಥಿಯ ನಿಧನಕ್ಕೆ ಎಸ್.ಜೆ.ಎಂ. ವಿದ್ಯಾಪೀಠದ ಅಧ್ಯಕ್ಷರಾದ ಡಾ. ಶಿವಮೂರ್ತಿ ಮುರುಘಾ ಶರಣರು, ಕಾರ್ಯದರ್ಶಿ ಎ.ಜೆ. ಪರಮಶಿವಯ್ಯ, ಕಾರ್ಯನಿರ್ವಹಣಾಧಿಕಾರಿ ಎಂ.ಜಿ.ದೊರೆಸ್ವಾಮಿ, ಕಾಲೇಜಿನ ಪ್ರಾಂಶುಪಾಲರಾದ ಡಾ|| ಭಾರತಿ ಹಾಗು ಸಿಬ್ಬಂದಿ ವರ್ಗದವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos