ದಿಢೀರನೆ ಪಿಎಸ್​​ಐ ಎತ್ತಂಗಡಿ..!

ದಿಢೀರನೆ ಪಿಎಸ್​​ಐ ಎತ್ತಂಗಡಿ..!

ಬೆಂಗಳೂರು,ನ. 6 : ಯಾದಗಿರಿಯಲ್ಲಿ ಜೆಡಿಎಸ್ನ ಕಾರ್ಯಕರ್ತನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ ಆರೋಪ ಮೇಲೆ ಸಬ್ಇನ್ಸ್ಪೆಕ್ಟರ್ ಬಾಪುಗೌಡ ಪಾಟೀಲ್ ಅವರನ್ನು ಅವರನ್ನು ಕೂಡಲೇ ಅಮಾನತುಪಡಿಸಬೇಕೆಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಗುಡಗಿದ್ದಾರೆ.
ಸಬ್ಇನ್ಸ್ಪೆಕ್ಟರ್ ಬಾಪುಗೌಡ ಪಾಟೀಲ್ ಮೇಲೆ ಕ್ರಮ ಕೈಗೊಳ್ಳದಿದ್ದರೆ ನಾಳೆಯಿಂದ ಮುಖ್ಯಮಂತ್ರಿ ಯಡಿಯೂರಪ್ಪನವರ ಮನೆ ಮುಂದೆ ಧರಣಿ ಮಾಡುವುದಾಗಿದೆ ಖಡಕ್ ಎಚ್ಚರಿಕೆ ನೀಡಿದರು.

ಬೆನ್ನಲ್ಲೇ ರಾಜ್ಯ ಸರ್ಕಾರ ಇಂದು ಬೆಳಗ್ಗೆ ಯಾದಗಿರಿ ಸಬ್ಇನ್ಸ್ಪೆಕ್ಟರ್ ಬಾಪು ಗೌಡ ಪಾಟೀಲ್ ಅವರನ್ನು ದಿಢೀರನೆ ಎತ್ತಂಗಡಿ ಮಾಡಿರುವುದರ ಜೊತೆಗೆ ಕಡ್ಡಾಯವಾಗಿ ರಜೆ ತೆಗೆದುಕೊಳ್ಳಬೇಕೆಂದು ಸೂಚಿಸಿದೆ.

ಫ್ರೆಶ್ ನ್ಯೂಸ್

Latest Posts

Featured Videos