ಗೋಲಿಬಾರ್  ದೃಶ್ಯಾವಳಿಯನ್ನು ಸರ್ಕಾರ ಕೂಡಲೇ ಬಿಡುಗಡೆಗೊಳಿಸಬೇಕು

ಗೋಲಿಬಾರ್  ದೃಶ್ಯಾವಳಿಯನ್ನು ಸರ್ಕಾರ ಕೂಡಲೇ ಬಿಡುಗಡೆಗೊಳಿಸಬೇಕು

ಬೆಂಗಳೂರು, ಜ.11:  ಕಳೆದ ವರ್ಷ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ವೇಳೆ ನಡೆದ ಗೋಲಿಬಾರ್ ನ ಎಲ್ಲಾ ವಿದ್ಯಮಾನಗಳ ದೃಶ್ಯಾವಳಿಗಳನ್ನು ಸರ್ಕಾರ ತಕ್ಷಣವೇ ಅಧಿಕೃತವಾಗಿ ಬಿಡುಗಡೆ ಮಾಡಬೇಕೆಂದು ವಿಧಾನ ಪರಿಷತ್ ಸದಸ್ಯ ಎಸ್. ಎಲ್. ಭೋಜೇಗೌಡ ಒತ್ತಾಯಿಸಿದ್ದಾರೆ.

ಜೆಡಿಎಸ್ ನಾಯಕ ಕುಮಾರಸ್ವಾಮಿ ಅವರು ಬಿಡುಗಡೆ ಮಾಡಿರುವ ಸಿಡಿ ಕಟ್ ಅಂಡ್ ಪೇಸ್ಟ್ ಎಂದು ಮುಖ್ಯಮಂತ್ರಿ ಹೇಳಿರುವುದನ್ನು ತೀವ್ರವಾಗಿ ಖಂಡಿಸಿರುವ ಅವರು, ಸರ್ಕಾರ ಕೂಡಲೇ ಗೋಲಿಬಾರ್ ದೃಶ್ಯಾವಳಿಗಳನ್ನು ಬಿಡುಗಡೆ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಮಂಗಳೂರಿನಲ್ಲಿ ಗೋಲಿಬಾರ್ ದಿನ ನಡೆದ ಬೆಳಗ್ಗೆ 9ರಿಂದ ಸಂಜೆ ತನಕದ  ಸಿಸಿಟಿವಿ ದೃಶ್ಯಾವಳಿಗಳನ್ನು ಮಂಗಳೂರು ಪೊಲೀಸ್ ಕಮಿಷನರ್  ಹಾಗೂ ರಾಜ್ಯ ಸರ್ಕಾರ ತಕ್ಷಣ ಬಿಡುಗಡೆ ಮಾಡಲಿ. ಸತ್ಯಾಸತ್ಯತೆ ಬಯಲಾಗುತ್ತದೆ ಎಂದು ಭೋಜೇಗೌಡ ತಿಳಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos