ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಹಲವಾರು ಪ್ರಾಣಿಗಳು ಕಾಡನ್ನು ಬಿಟ್ಟು ನಾಡಿಗೆ ಬರುವುದನ್ನು ಎಲ್ಲರೂ ಗಮನಿಸಿದ್ದೇವೆ. ಏಕೆಂದರೆ ನಾವು ಮನುಷ್ಯರು ಕಾಡನ್ನೆಲ್ಲ ನಾಶ ಮಾಡಿ ಮನೆಗಳನ್ನು ಹಾಗೂ ಹಲವಾರು ವಿವಿಧ ಕೈಗಾರಿಕೆಗಳನ್ನು ಸ್ಥಾಪನೆ ಮಾಡುತ್ತಿದ್ದೇವೆ. ನಾವು ಕಾಡನ್ನು ನಾಶ ಮಾಡಿದರೆ ಪ್ರಾಣಿಗಳು ಎಲ್ಲಿ ವಾಸ ಮಾಡುತ್ತವೆ. ಆದ್ದರಿಂದ ಪ್ರಾಣಿಗಳು ಆಹಾರ ಹುಡುಕಿಕೊಂಡು ಊರುಗಳತ್ತ ಬರುತ್ತಿದ್ದಾವೆ.
ಚಿಕ್ಕಬಳ್ಳಾಪುರ ತಾಲೂಕಿನ ನೂತನ ಮೆಡಿಕಲ್ ಕಾಲೇಜು ಬಳಿ ಅಪರಿಚಿತ ವಾಹನ ಡಿಕ್ಕಿಯಾಗಿ ಚಿರತೆ ಸ್ಥಳದಲ್ಲೇ ಮೃತಪಟ್ಟಿದೆ. ಸುಮಾರು ಎರಡು ವರ್ಷದ ಚಿರತೆ ಇಂದು ಮುಂಜಾನೆ ಎರಡು ಗಂಟೆ ಸಮಯದಲ್ಲಿ ರಸ್ತೆ ದಾಟುತ್ತಿದ್ದ ವೇಳೆ ವಾಹನ ಡಿಕ್ಕಿಯಾಗಿ ಸಾವಿಗೀಡಾಗಿದೆ. ಪೆರೇಸಂದ್ರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.