ವಿಜಯಪುರ, ಅ. 28: ಬೈಕ್ ಗಳ ನಡುವೆ ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್ ಸವಾರರನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸಿದರೂ, ವೈದ್ಯರಿಲ್ಲದೇ ಚಿಕಿತ್ಸೆ ನೀಡದೆ ಸಂಬಂಧಿಗಳು ಅಕ್ರೋಶ ಹೊರ ಹಾಕಿದ ಘಟನೆ ಸಿಂದಗಿಯಲ್ಲಿ ನಡೆದಿದೆ.
ಸಿಂದಗಿ ಪೊಲೀಸ್ ಠಾಣೆಯ ಬಳಿ ಬೈಕ್ ಗಳ ಮುಖಾಮುಖಿಯಾಗಿ ಅಪಘಾತ ಸಂಭವಿಸಿದ್ದು, ಗಾಯಾಳುಗಳನ್ನು ಅಂಬ್ಯುಲೆನ್ಸ್ ಮೂಲಕ ತಾಲೂಕಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಸರಕಾರಿ ಆಸ್ಪತ್ರೆಯಲ್ಲಿ ವೈದ್ಯರಿಲ್ಲದೇ ಗಾಯಾಳುಗಳಿಗೆ ತ್ವರಿತ ಚಿಕಿತ್ಸೆ ಸಿಗದೇ ಗಾಯಾಳುಗಳು ಪರದಾಡಿತ್ತಿದ್ದಾರೆ.