ಭವಿಷ್ಯ ನುಡಿದ ಸಿದ್ದು

ಭವಿಷ್ಯ ನುಡಿದ ಸಿದ್ದು

ಬೆಳಗಾವಿ, ನ.29 : ಡಿ.9ರ ನಂತರ ಮತ್ತೆ ನಮ್ಮ ಸರ್ಕಾರ ಅಧಿಕಾರಕ್ಕೆ ಬರುತ್ತೆ. 15 ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ. ಇದು ಅತೀಶಯೋಕ್ತಿ ಅಲ್ಲ, ಯಡಿಯೂರಪ್ಪ ಎಷ್ಟೇ ರೌಂಡ್ ಹೊಡಿಲಿ, ನಾವು ಅಧಿಕಾರಕ್ಕೆ ಬರ್ತೆವೆ ಎಂದು ಮತ್ತೊಮ್ಮೆ ಸರಕಾರ ಪತನದ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಭವಿಷ್ಯ ನುಡಿದಿದ್ದಾರೆ.

ಅಥಣಿಯ ತೆಲಸಂಗದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗಜಾನನ ಮಂಗಸೂಳಿ ಪರ ಪ್ರಚಾರದಲ್ಲಿ ಮಾತನಾಡಿ, ಇದು ಯಾರಿಗೂ ಬೇಡವಾದ ಚುನಾವಣೆ. ಇದರಿಂದ ಯಾರಿಗೆ ಲಾಭ? ನಿಮಗೆ ಲಾಭವಾಗಿಲ್ಲ. ರಮೇಶ್ ಜಾರಕಿಹೊಳಿ, ಮಹೇಶ್ ಕುಮಟಳ್ಳಿ, ಶ್ರೀಮಂತ ಪಾಟೀಲ್ ಅವರಿಗೆ ಲಾಭವಾಗಿದೆ. ಅಭಿವೃದ್ಧಿಗಾಗಿ ಕಾಂಗ್ರೆಸ್ ಬಿಟ್ಟಿರುವುದಾಗಿ ಹೇಳುತ್ತಿರುವುದು ಅನರ್ಹ ಶಾಸಕರು ಹಸಿ ಸುಳ್ಳು ಹೇಳುತ್ತಿದ್ದಾರೆ. ಇವರೆಲ್ಲ ಮಾರಾಟವಾದವರು. ಸಂತೆಯಲ್ಲಿ ಪಶುಗಳಂತೆ ಮಾರಾಟವಾದ ನಿಮಗೆ ನಾಚಿಕೆಯಾಗುವುದಿಲ್ಲವೇ? ನಿಮ್ಮನ್ನು ಕೇಳಿ ಕಾಂಗ್ರೆಸ್ ಬಿಟ್ಟಿದ್ದಾರಾ? ತೆಲಸಂಗ ಮತದಾರರಿಗೆ ಸಿದ್ಧರಾಮಯ್ಯ ಪ್ರಶ್ನೆ ಮಾಡಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos