ಮೈಸೂರು, ಸೆ. 27: ಚಾಮುಂಡಿಬೆಟ್ಟದಲ್ಲಿ ಮಹಿಷ ಹಬ್ಬ ಆಚರಣೆಗೆ ಹಾಕಲಾಗಿದ್ದ ವೇದಿಕೆಯನ್ನ ತೆರವುಗೊಳಿಸಿದ ಸಂಸದ ಪ್ರತಾಪ್ ಸಿಂಹ ಅವರ ನಡೆಯನ್ನ ಖಂಡಿಸಿ. ಮೈಸೂರಿನಲ್ಲಿ ಪ್ರಗತಿಪರ ಚಿಂತಕರು ಹಾಗೂ ಮಠಾಧೀಶರು ಸೇರಿ ಬೃಹತ್ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಗರದ ಅಂಬೇಡ್ಕರ್ ಪ್ರತಿಮೆ ಎದುರು ಜಮಾಯಿಸಿದ ಪ್ರಗತಿಪರ ಚಿಂತಕರು. ಸಂಸದ ಪ್ರತಾಪ್ ಸಿಂಹ ಅವರ ವಿರುದ್ಧ ಘೋಷಣೆ ಕೂಗಿ ಕಿಡಿಕಾರಿದರು. ಇದೇ ವೇಳೆ ನಗರದ ಪ್ರಮುಖ ಬೀದಿಯಲ್ಲಿ ಮೆರವಣಿಗೆ
ನಡೆಸಿದ ಪ್ರತಿಭಟನಾಕಾರರು. ಪ್ರತಾಪ್ ಸಿಂಹ ಅವರ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು ಆಕ್ರೋಶ ವ್ಯಕ್ತಪಡಿಸಿದ್ರು. ಇದೇ ಸಂದರ್ಭದಲ್ಲಿ ದಲಿತ ವೆಲ್ ಪೇರ್ ಟ್ರಸ್ಟ್ ಅಧ್ಯಕ್ಷ ಶಾಂತರಾಜು ಮಾತನಾಡಿ. ಕಳೆದ ಮೂರ್ನಾಲು ವರ್ಷಗಳಿಂದ ಮಹಿಷ ದಸರಾ ಆಚರಣೇ ಮಾಡಿಕೊಂಡು ಬಂದಿದ್ದೇವೆ. ಪ್ರತಾಪ್ ಸಿಂಹರಂತ ಕೋಮುವಾದಿಗಳಿಂದ ಶಾಂತಿ ಕದಡುವ ಕೆಲಸ ಮಾಡಲಾಗುತ್ತಿದೆ. ಈ ಮೂ
ಲಕ ಹಿಂದುಳಿದವರ ಆಚರಣೆಗಳನ್ನ ಅಡಿಪಡಿಸುತ್ತಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ವಿರುದ್ಧ ಕೆಂಡಾಕಾರಿದ್ರು.
ಒಟ್ಟಾರೆ ಪ್ರತಾಪ್ ಸಿಂಹರ ನಡೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ದಲಿತ ಸಂಘಟನೆಗಳು ಪ್ರತಿಭಟನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಸಾವಿರಾರು ಜನರು ಪ್ರತಿಭಟನೆಯಲ್ಲಿ ಪಾಲ್ಗೊಂಡು ಪ್ರತಾಪ್ ಸಿಂಹ ವಿರುದ್ಧ ಕೆಂಡಕಾರಿದ್ರು.