ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಅರ್ಹ ವ್ಯಕ್ತಿ ಆಯ್ಕೆ

ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಅರ್ಹ ವ್ಯಕ್ತಿ ಆಯ್ಕೆ

ದೇವನಹಳ್ಳಿ: ಅಖಿಲ ಕರ್ನಾಟಕ ಕನ್ನಡ ಸಾಹಿತ್ಯ ಪರಿಷತ್ (ಕಸಾಪ) ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ತಾಲೂಕು ಕೇಂದ್ರಗಳಲ್ಲಿ ನೂತನ ಕಸಾಪ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪೂರ್ವಭಾವಿ ಸಭೆಯ ಮೂಲಕ ಸೂಕ್ತ ಅಭ್ಯರ್ಥಿಯನ್ನು ಜಿಲ್ಲಾಧ್ಯಕ್ಷರನ್ನಾಗಿ ಆಯ್ಕೆ ಮಾಡಬೇಕು ಎಂದು ದೇವನಹಳ್ಳಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಆರ್.ಕೆ.ನಂಜೇಗೌಡ (ಆರ್‌ಎನ್‌ಕೆ) ತಿಳಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ದೇವನಹಳ್ಳಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಮುಖಂಡರ, ಕನ್ನಡ ಅಭಿಮಾನಿಗಳ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಕುವೆಂಪು, ಬೇಂದ್ರೆಯವರಂತಹ ಕವಿಗಳ, ಸಾಹಿತಿಗಳು ಪಟ್ಟಿರುವ ಶ್ರಮದಲ್ಲಿ ಒಂದು ಕೂದಲಿನಷ್ಟು ನಾವು ಮಾಡಲು ಸಾಧ್ಯವಿಲ್ಲ. ಮುಂದಿನ ದಿನಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ ಅನ್ನು ಮತ್ತಷ್ಟು ಎತ್ತರಕ್ಕೆ ತೆಗೆದುಕೊಂಡು ಹೋಗಬೇಕು. ಒಂದೇ ಜಾಗಕ್ಕೆ ಸೀಮಿತಗೊಳಿಸಿದರೆ, ಸಾಹಿತ್ಯ ಪಸರಿಸುವುದಿಲ್ಲ. ರಾಜ್ಯಮಟ್ಟದಲ್ಲಿ ಗುರ್ತಿಸುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಸಾಪಕ್ಕೆ ಶ್ರಮ ವಹಿಸಬೇಕು. ಪ್ರತಿಯೊಬ್ಬರ ಅಭಿಪ್ರಾಯಗಳನ್ನು ಕಲೆ ಹಾಕಿ. ಪೂರ್ವ ಭಾವಿಗಳನ್ನು ನಡೆಸಿ, ಮುಂದಿನ ಹಂತದಲ್ಲಿ ಮಾರ್ಚ್ ತಿಂಗಳೊಳಗೆ ಸೂಕ್ತ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಒಬ್ಬರನ್ನು ಆಯ್ಕೆ ಮಾಡಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು.

ಫ್ರೆಶ್ ನ್ಯೂಸ್

Latest Posts

Featured Videos