ಹುಬ್ಬಳ್ಳಿ, ಜ. 13: ಭಾರತೀಯ ಜನತಾ ಪಕ್ಷದ ಧಾರವಾಡ ಜಿಲ್ಲಾ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾ ಅಧ್ಯಕ್ಷರಾಗಿ ಅರವಿಂದ ಬೆಲ್ಲದ ಹಾಗೂ ಗ್ರಾಮಾಂತರ ಜಿಲ್ಲಾ ಅಧ್ಯಕ್ಷರಾಗಿ ಬಸವರಾಜ ಕುಂದಗೋಳಮಠ ಅಯ್ಕೆಯಾಗಿದ್ದಾರೆ. ಮುಂದಿನ ಮೂರು ವರ್ಷದ ಅವಧಿಯವರೆಗೂ ಕಾರ್ಯನಿರ್ವಹಿಸಲಿದ್ದಾರೆ.
ಇದೇ ವೇಳೆ ಮಾಧ್ಯಮ ಜೊತೆಗೆ ಮಾತನಾಡಿದ ಅರವಿಂದ ಬೆಲ್ಲದ, ಜಿಲ್ಲೆಯಲ್ಲಿ ಪಕ್ಷ ಸಂಘಟನೆಗೆ ಕೆಲಸ ಮಾಡುತ್ತೇನೆ. ಅಧ್ಯಕ್ಷ ಸ್ಥಾನ ಸಿಕ್ಕಿರುವುದು ನನ್ನ ಉತ್ಸಾಹವನ್ನು ಇಮ್ಮಡಿಗೊಳಿಸಿದೆ. ಜಿಲ್ಲೆ ಹಾಗೂ ನಗರದಲ್ಲಿ ಬಿಜೆಪಿ ಪಕ್ಷ ಸಂಘಟನೆಗೆ ಕ್ರೀಯಾಶೀಲವಾಗಿ ದುಡಿಯುವುದಾಗಿ ಹೇಳಿದರು.