ಗಾಂಧೀಜಿ ಪ್ರತಿಮೆ ಭಗ್ನ!

ಗಾಂಧೀಜಿ ಪ್ರತಿಮೆ ಭಗ್ನ!

ಉತ್ತರ ಪ್ರದೇಶದ, ಸೆ. 14: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಪ್ರತಿಮೆಯನ್ನು ದುಷ್ಕರ್ಮಿಗಳು ಉತ್ತರ ಪ್ರದೇಶದ ಜಲೌನ್ ಜಿಲ್ಲೆಯ ಕಾಲೇಜು ಕ್ಯಾಂಪಸ್ ನಲ್ಲಿರುವ ಭಗ್ನಗೊಳಿಸಿದ್ದಾರೆ.

ಒರಾಯ್ ನಲ್ಲಿರುವ ಗಾಂಧಿ ಇಂಟರ್ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಅನಾಮಧೇಯ ದುಷ್ಕರ್ಮಿಗಳ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

ಈ ಘಟನೆಯನ್ನು ಖಂಡಿಸಿ ಸ್ಥಳೀಯರು ಮತ್ತು ರಾಜಕೀಯ ಪಕ್ಷಗಳು ಪ್ರತಿಭಟನೆ ನಡೆಸಿದ್ದು, ಕೂಡಲೇ ದುಷ್ಕರ್ಮಿಗಳನ್ನು ಬಂಧಿಸಿ ಶಿಕ್ಷೆ ಕೊಡಬೇಕೆಂದು ಆಗ್ರಹಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos