ಗುಂಡಿಗೆ ಬಲಿಯಾದವರ ಕುಟುಂಬಕ್ಕೆ ಸಿಎಂ ಸಾಂತ್ವನ

ಗುಂಡಿಗೆ ಬಲಿಯಾದವರ ಕುಟುಂಬಕ್ಕೆ ಸಿಎಂ ಸಾಂತ್ವನ

ಮಂಗಳೂರು, ಡಿ. 21 : ಪ್ರತಿಭಟನೆ ವೇಳೆ ಮೃತಪಟ್ಟವರ ಕುಟುಂಬ ಸದಸ್ಯರೊಂದಿಗೆ ಮಾತನಾಡಿ, ಸಾಂತ್ವನ ಹೇಳಿದ್ದೇನೆ. ಮೃತರ ಕುಟುಂಬಕ್ಕೆ ಪರಿಹಾರ ನೀಡಲು ಜಿಲ್ಲಾಧಿಕಾರಿಗೆ ಸೂಚಿಸಿದ್ದೇನೆ. ಅವರು ಕಾನೂನು ಪ್ರಕಾರ ಪರಿಶೀಲಿಸಿ ಪರಿಹಾರ ನೀಡಲಿದ್ದಾರೆ. ಮನೆ ಇಲ್ಲದಿದ್ದರೆ ಮನೆಯನ್ನು ನಿರ್ಮಿಸಿಕೊಡಲಾಗುತ್ತದೆ. ಹಾಗೂ ಈ ಘಟನೆಯ ಬಗ್ಗೆ ಯಾವ ರೀತಿ ತನಿಖೆಯಾಗಬೇಕು ಎಂಬುದನ್ನು ಗೃಹ ಸಚಿವರು ಮತ್ತು ನಾವು ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಬಿಎಸ್ವೈ, ಪೊಲೀಸ್ ಅಧಿಕಾರಿಗಳು, ಧಾರ್ಮಿಕ ಮುಖಂಡರೊಂದಿಗೆ ಸಭೆ ಮಾಡಲಾಗಿದೆ. ಕರ್ಫ್ಯೂ ಸಡಿಲಗೊಳಿಸಬೇಕು ಎಂದು ಎಲ್ಲರೂ ಕೇಳುತ್ತಿದ್ದಾರೆ. ಇಂದು ಮಧ್ಯಾಹ್ನ ಮೂರು ಗಂಟೆಯಿಂದ ಆರು ಗಂಟೆವರೆಗೆ ಕರ್ಫ್ಯೂ ತೆರವುಗೊಳಿಸಿ, ರಾತ್ರಿ ಮುಂದುವರೆಸಲಾಗುತ್ತದೆ. ನಾಳೆ ಹಗಲು ಪೂರ್ತಿ ಕರ್ಫ್ಯೂ ತೆರವುಗೊಳಿಸಿ, ರಾತ್ರಿ ಪೂರ್ತಿ ಮುಂದುವರೆಸಲಾಗುತ್ತದೆ. ಸೋಮವಾರ ಸಂಪೂರ್ಣವಾಗಿ ಕರ್ಫ್ಯೂ ತೆರವುಗೊಳಿಸಲಾಗುತ್ತದೆ. ಹಾಗೂ 144 ಸೆಕ್ಷನ್ ಮುಂದುವರೆಯಲಿದೆ ಎಂದು ಸಿಎಂ ತಿಳಿಸಿದರು.

ಫ್ರೆಶ್ ನ್ಯೂಸ್

Latest Posts

Featured Videos